ತುಮಕೂರು: ಜಿಲ್ಲೆಯ ತಿಪಟೂರು ನಗರದ ಹಿಂಡಿಸ್ಕೆರೆ ಗೇಟ್ ಬಳಿಯ ಪೆಟ್ರೋಲ್ ಬಂಕ್ನ ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದ ಇಬ್ಬರು ಕಾರ್ಮಿಕರು ಮೃತಪಟ್ಟ ದಾರುಣ ಘಟನೆ ನಡೆದ ವರದಿಯಾಗಿದೆ.
ಮೃತ ಕಾರ್ಮಿಕರನ್ನು ನಾಗರಾಜು (50), ರವಿ (38) ಎಂದು ಗುರುತಿಸಲಾಗಿದೆ. ಅವರು ಬಂಕ್ ಸ್ವಚ್ಛಗೊಳಿಸುವಾಗ ಉಸಿರುಟ್ಟಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಟ್ಯಾಂಕ್ ಸ್ವಚ್ಛಗೊಳಿಸುವಾಗ ಸುರಕ್ಷತಾ ಕ್ರಮಗಳನ್ನು ಅನುಸರಿಸಿದ ಕಾರಣ ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.
ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಮೃತ ದೇಹಗಳನ್ನ ಹೊರಕ್ಕೆ ತೆಗೆದು ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಲಾಗಿದೆ. ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ