ಬೆಂಗಳೂರು: ಕೆ.ಆರ್ ಮಾರ್ಕೆಟ್ನ ಫ್ಲೈಓವರ್ ಮೇಲೆ ನಿಂತು ನೋಟುಗಳನ್ನು ಎಸೆದಿದ್ದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದ್ದು ಈ ಸಂಬಂಧ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಪ್ರಕರಣ ಸಂಬಂಧ ತನಿಖೆಗೆ ಇಳಿದ ಪೊಲೀಸರು, ನಾಗಬಾವಿಯ ಯೂ ಟ್ಯೂಬ್ ಚಾನಲ್ ಕಚೇರಿಯಲ್ಲಿ ಹಣ ಎಸೆದ ವ್ಯಕ್ತಿ ಇರುವುದನ್ನು ಖಚಿತಪಡಿಸಿ ಕಚೇರಿಗೆ ಹೋಗಿ ವಶಕ್ಕೆ ಪಡೆದಿದ್ದಾರೆ. ಹಣ ಎಸೆದ ವ್ಯಕ್ತಿ ಅರುಣ ಎಂದು ಹೇಳಲಾಗಿದ್ದು, ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ.
ಫ್ಲೈಓವರ್ನಿಂದ ಹಣ ಎಸೆದ ಘಟನೆ ಸಂಬಂಧ ಕರ್ನಾಟಕ ಪೊಲೀಸ್ ಕಾಯ್ದೆ 92ಡಿ, ಐಪಿಸಿ 283ರ ಅಡಿ ಎನ್ಸಿಆರ್ ಪ್ರಕರಣ ದಾಖಲಿಸಿದ ಕೆ.ಆರ್.ಮಾರ್ಕೆಟ್ ಠಾಣಾ ಪೊಲೀಸರು, ಕಾರಣ ನೀಡುವಂತೆ ನಾಗರಭಾವಿಯಲ್ಲಿರುವ ಹಣ ಎಸೆದ ಅರುಣ ನಿವಾಸಕ್ಕೆ ನೋಟಿಸ್ ಜಾರಿ ಕಳುಹಿಸಿದ್ದರು. ಅದಾಗ್ಯೂ ಉತ್ತರಿಸದಿದ್ದಾಗ ಅರುಣ ನಾಗರಭಾವಿಯಲ್ಲಿರುವ ಯೂಟ್ಯೂಬ್ ಕಚೇರಿಯಲ್ಲಿ ಇರುವುದು ಗೊತ್ತಾಗಿ ಅಲ್ಲಿಗೆ ಹೋಗಿ ಠಾಣೆಗೆ ಕರೆದೊಯ್ದಿದ್ದಾರೆ.
ನಗರದಲ್ಲಿ ಸದಾ ಜನಜಂಗುಳಿಯಿಂದಿರುವ ಪ್ರದೇಶದಲ್ಲಿ ಇಂದು ಮಂಗಳವಾರ ಬೆಳಗ್ಗೆ 10:50ರ ವೇಳೆ ವ್ಯಕ್ತಿಯೊಬ್ಬ ಬ್ಯಾಗ್ ಒಂದರಲ್ಲಿ 10 ರೂ ನೋಟುಗಳನ್ನು ಫ್ಲೈ ಓವರ್ ಮೇಲಿಂದ ಎಸೆದಿದ್ದ.ಬೈಕ್ನಲ್ಲಿ ಬಂದಂತಹ ಅಪರಿಚಿತ ವ್ಯಕ್ತಿ ಫ್ಲೈಓವರ್ನ ಮೇಲೆ ನಿಂತು ನೋಟುಗಳನ್ನು ಎಸೆದು, ಅಲ್ಲಿಂದ ಹೋಗಿದ್ದ. ಮೇಲಿಂದ ನೋಟುಗಳು ಬೀಳುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಆಯ್ದುಕೊಳ್ಳಲು ಮುಂದಾಗಿದ್ದಾರೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ