ಧಾರವಾಡ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಐ.ಟಿ.ಐ ಕಾಲೇಜಿನಲ್ಲಿ ಜನವರಿ ೨೯ರಂದು ಬೆಳಿಗ್ಗೆ ೧೦:೩೦ ಕ್ಕೆ ಎಸ್.ಎಸ್.ಎಲ್.ಸಿ ಓದುತ್ತಿರುವ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ.
“ಕೌಶಲ್ಯ ಸಂಪಾದನೆಯೊಂದಿಗೆ ಉನ್ನತ ಶಿಕ್ಷಣ” ಹಾಗೂ “ಬೆಳೆಯುತ್ತಿರುವ ಭಾರತದಲ್ಲಿ ಕೈಗಾರಿಕೆಗಳ ಅವಶ್ಯಕತೆ” ವಿಷಯಗಳ ಮೇಲೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಹುಬ್ಬಳ್ಳಿ-ಧಾರವಾಡ ಹಾಗೂ ಸುತ್ತಮುತ್ತಲಿನ ಗ್ರಾಮದ ಶಾಲೆಗಳ ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂದು ತಿಳಿಸಲಾಗಿದೆ. ಪ್ರಬಂಧವನ್ನು ಕನ್ನಡ ಅಥವಾ ಇಂಗ್ಲಿಷ್‌ ಭಾಷೆಯಲ್ಲಿ ಬರೆಯಬಹುದು. ಆಸಕ್ತ ವಿದ್ಯಾರ್ಥಿಗಳು 9591534801, , 7090097469 ಅಥವಾ 0836-2462202ಕ್ಕೆ ಕರೆ ಮಾಡಿ ತಮ್ಮ ಹೆಸರಗಳನ್ನು 28-01-2023ರ ಒಳಗಾಗಿ ನೋಂದಾಯಿಸಿಕೊಳ್ಳಲು ಪ್ರಕಟಣೆ ತಿಳಿಸಿದೆ.

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement