ನಾನ್ಯಾಕೆ ಕಾಂಗ್ರೆಸ್‌ ಟಿಕೆಟ್‌ ನಿರೀಕ್ಷಿಸಬಾರದು? : ಮಾಧ್ಯಮದವರ ಪ್ರಶ್ನೆಗೆ ಕಮಲ್‌ ಹಾಸನ್‌

ಚೆನ್ನೈ: ಮಕ್ಕಳ ನಿಧಿ ಮೈಯಂ ಎಂಬ ಪಕ್ಷ ಸ್ಥಾಪಿಸಿ ತಮಿಳುನಾಡಿನ ರಾಜಕೀಯದಲ್ಲಿ ಸಕ್ರಿಯವಾಗಿರುವ ನಟ, ರಾಜಕಾರಣಿ ಕಮಲ್‌ ಹಾಸನ್‌ ಕಾಂಗ್ರೆಸ್‌ ಪಕ್ಷಕ್ಕೆ ಸೇರಬಹುದು ಎಂಬ ಊಹಾಪೋಹ ಸೃಷ್ಟಿಯಾಗಿದೆ. ನಾನ್ಯಾಕೆ ಕಾಂಗ್ರೆಸ್‌ನಿಂದ ಲೋಕಸಭಾ ಟಿಕೆಟ್‌ ಅನ್ನು ನಿರೀಕ್ಷಿಸಬಾರದು ಎಂದು ಕಮಲ್‌ ಹಾಸನ್‌ ಹೇಳಿರುವುದು ಈಗ ತಮಿಳುನಾಡು ರಾಜಕೀಯದಲ್ಲಿ ಭಾರೀ ಚರ್ಚೆಯ ವಿಷಯವಾಗಿದೆ.
ತಮಿಳುನಾಡಿನ ಪೂರ್ವ ಈರೋಡ್‌ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್‌ ಹಾಗೂ ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿ ಇವಿಕೆಎಸ್‌ ಇಳಂಗೋವನ್‌ ಅವರಿಗೆ ಕಮಲ್‌ ಹಾಸನ್‌ ಬೆಂಬಲ ಸೂಚಿಸಿದ್ದಾರೆ.
ಬುಧವಾರ ಸಂಜೆ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್‌ ಅಭ್ಯರ್ಥಿ ಇಳಂಗೋವನ್‌ ಅವರಿಗೆ ಬಂಬಲ ಸೂಚಿಸಿದ ಅವರು, ಈ ವೇಳೆ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಟಿಕೆಟ್‌ ನಿರೀಕ್ಷಿಸುತ್ತಿದ್ದೀರಾ ಎಂದು ಮಾಧ್ಯಮದವರ ಪ್ರಶ್ನೆಗೆ, ನಾನು ಯಾಕೆ ಕಾಂಗ್ರೆಸ್‌ ಟಿಕೆಟ್‌ ನಿರೀಕ್ಷಿಸಬಾರದು ಎಂದು ಹೇಳಿದ ಅವರು, ರಾಷ್ಟ್ರೀಯ ಹಿತಾಸಕ್ತಿಗಾಗಿ ಪಕ್ಷವು ಕಾಂಗ್ರೆಸ್‌ ಬೆಂಬಲಿಸುವ ನಿರ್ಧಾರ ತೆಗೆದುಕೊಂಡಿದೆ ಎಂದರು.
ಕಳೆದ ತಿಂಗಳು ದೆಹಲಿಯಲ್ಲಿ ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರೆಯಲ್ಲಿ ಕಮಲ್‌ ಹಾಸನ್‌ ಭಾಗಿಯಾಗಿದ್ದರು.
ನಂತರ ಇಳಂಗೋವನ್ ಅವರು ಜನವರಿ 23 ರಂದು ತಮ್ಮ ಅಲ್ವಾರ್‌ಪೇಟೆ ಕಚೇರಿಯಲ್ಲಿ ಹಾಸನ್ ಅವರನ್ನು ಭೇಟಿಯಾಗಿ ಉಪಚುನಾವಣೆಗೆ ಬೆಂಬಲ ಕೋರಿದ ನಂತರ ಈ ಬೆಳವಣಿಗೆಯಾಗಿದೆ. ಎಂಎನ್‌ಎಂ ಕಾರ್ಯಕಾರಿ ಸದಸ್ಯರೊಂದಿಗೆ ಚರ್ಚೆ ನಡೆಸಿದ ನಂತರ ಕಮಲ್ ಹಾಸನ್ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವ ನಿರ್ಧಾರ ಪ್ರಕಟಿಸಿದರು.

ಪ್ರಮುಖ ಸುದ್ದಿ :-   ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಮತಗಳ ಸಂಪೂರ್ಣ ಎಣಿಕೆ : ಎಲ್ಲ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂ ಕೋರ್ಟ್

“ಈರೋಡ್ ಪೂರ್ವ ಉಪಚುನಾವಣೆಯಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಯನ್ನು ಬೆಂಬಲಿಸಲು ಪಕ್ಷದ ಕಾರ್ಯಕಾರಿ ಸದಸ್ಯರು ಸರ್ವಾನುಮತದಿಂದ ನಿರ್ಧರಿಸಿದ್ದಾರೆ. ಇದು ವರ್ತಮಾನದ ನಿರ್ಧಾರ ಎಂದು ಕಮಲ್‌ ಹಾಸನ್‌ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
2024 ರ ಸಾರ್ವತ್ರಿಕ ಚುನಾವಣೆಗೆ ಬೆಂಬಲ ಮುಂದುವರಿಯುತ್ತದೆಯೇ ಎಂದು ಕೇಳಿದಾಗ, “ಇದು ಏಕೈಕ ನಿರ್ಧಾರವಾಗಿದೆ. ಇದು ಈರೋಡ್ ಪೂರ್ವ ಉಪಚುನಾವಣೆಗೆ ಮತ್ತು 2024 ರ ಸಾರ್ವತ್ರಿಕ ಚುನಾವಣೆಯ ಬಗ್ಗೆ ಹೇಳಲು ಇನ್ನೂ ಒಂದು ವರ್ಷ ಸಮಯವಿದೆ ಎಂದರು.
“ನಾನು ಇದನ್ನು ರಾಷ್ಟ್ರೀಯ ಮಹತ್ವದ ಕ್ಷಣ ಎಂದು ಕರೆದಿದ್ದೇನೆ. ರಾಷ್ಟ್ರೀಯ ಪ್ರಾಮುಖ್ಯತೆಯ ವಿಷಯಕ್ಕೆ ಬಂದಾಗ ನೀವು ಪಕ್ಷದ ಸಿದ್ಧಾಂತವನ್ನು ಸಹ ಪಕ್ಕಕ್ಕಿಡಬೇಕು. ಜನರು ಅದರಲ್ಲಿ ಪ್ರಾಥಮಿಕರಾಗುತ್ತಾರೆ. ಏಕಸಂಸ್ಕೃತಿಯ ವಿರುದ್ಧ ನಾವಿದ್ದೇವೆ. ಭಾರತದ ಬಹುತ್ವವು ದೇಶವನ್ನು ಅನನ್ಯಗೊಳಿಸುತ್ತದೆ ಎಂದು ನಾನು ನಿಜವಾಗಿಯೂ ನಂಬುತ್ತೇನೆ ಎಂದು ಹಾಸನ್ ಅವರು ಕಾಂಗ್ರೆಸ್ ಮತ್ತು ಡಿಎಂಕೆ ಬಗ್ಗೆ ತಮ್ಮ ಹಿಂದಿನ ಟೀಕೆಗಳ ಬಗ್ಗೆ ಕೇಳಿದಾಗ ಉತ್ತರಿಸಿದರು.
ಆದರೆ ಈ ನಿರ್ಧಾರವು ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ನಾವು ರಾಜಿ ಮಾಡಿಕೊಂದ್ದೇವೆ ಎಂದರ್ಥವಲ್ಲ ಎಂದು ಒತ್ತಿ ಹೇಳಿದರು. ಇದು ದೊಡ್ಡ ಕಾರಣದ ವಿರುದ್ಧದ ಯುದ್ಧವಾಗಿದೆ, ಇದರಲ್ಲಿ ನಾನು ಸಣ್ಣ ವ್ಯತ್ಯಾಸಗಳನ್ನು ತ್ಯಾಗ ಮಾಡಲು ಸಿದ್ಧನಿದ್ದೇನೆ. ಹಾಗಂತ ನಾನು ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುವುದಿಲ್ಲ ಎಂದಲ್ಲ ಎಂದು ಹೇಳಿದರು.
ಈರೋಡ್ (ಪೂರ್ವ) ವಿಧಾನಸಭಾ ಕ್ಷೇತ್ರಕ್ಕೆ ಫೆಬ್ರವರಿ 27ರಂದು ನಡೆಯಲಿರುವ ಉಪಚುನಾವಣೆಗೆ ತಮಿಳುನಾಡು ಕಾಂಗ್ರೆಸ್ ಸಮಿತಿ (ಟಿಎನ್‌ಸಿಸಿ) ಮಾಜಿ ಮುಖ್ಯಸ್ಥ ಇವಿಕೆಎಸ್ ಇಳಂಗೋವನ್ ಅವರನ್ನು ಪಕ್ಷದ ಅಭ್ಯರ್ಥಿ ಎಂದು ಕಾಂಗ್ರೆಸ್ ಭಾನುವಾರ ಘೋಷಿಸಿದೆ.
ಇದರ ಬೆನ್ನಲ್ಲೇ ಕಾಂಗ್ರೆಸ್‌ ಅಭ್ಯರ್ಥಿಗೆ ಬೆಂಬಲ ಸೂಚಿಸಿರುವುದನ್ನು ಗಮನಿಸಿದರೆ ಮುಂದಿನ ಸಾರ್ವತ್ರಿಕ ಚುನಾವಣೆ ಹೊತ್ತಿಗೆ ಕಮಲ್‌ ಹಾಸನ್‌ ಕಾಂಗ್ರೆಸ್‌ ಸಖ್ಯದಲ್ಲಿರಬಹುದು ಎಂದು ರಾಜಕೀಯ ತಜ್ಞರು ವಿಶ್ಲೇಷಿಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2024 : 2ನೇ ಹಂತದ 88 ಕ್ಷೇತ್ರಗಳಲ್ಲಿ 63% ಮತದಾನ

 

 

 

2 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement