ವಿವಾದ-ನಿಷೇಧದ ಮಧ್ಯೆ, ಕೇರಳ ಕಾಂಗ್ರೆಸ್‌ನಿಂದ ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಕೇರಳದ ಕಾಂಗ್ರೆಸ್ ಘಟಕವು ಇಂದು, ಗುರುವಾರ ತಿರುವನಂತಪುರದಲ್ಲಿ ಪ್ರದರ್ಶಿಸಿತು.
ಆದರೆ ಕೇಂದ್ರ ಸರ್ಕಾರವು ಭಾರತದಲ್ಲಿ ಅದನ್ನು ಸುಳ್ಳು ಮತ್ತು ಪ್ರೇರಿತ “ಪ್ರಚಾರ” ಎಂದು ಹೇಳಿ ನಿಷೇಧಿಸಿದೆ.
ಬಿಬಿಸಿಯ ಎರಡು ಭಾಗಗಳ ಸಾಕ್ಷ್ಯಚಿತ್ರವು 2002 ರ ಗುಜರಾತ್ ಗಲಭೆಗಳು ಮತ್ತು ಪ್ರಧಾನಿ ಮೋದಿಯವರು ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗಿನ ರಾಜಕೀಯದ ಬಗ್ಗೆ ಮಾತನಾಡುತ್ತದೆ.ದೇಶಾದ್ಯಂತ ಹಲವಾರು ವಿರೋಧ ಪಕ್ಷಗಳು ಮತ್ತು ಮುಕ್ತ ಭಾಷಣ ಕಾರ್ಯಕರ್ತರು ಆಯೋಜಿಸಿದ ಇಂತಹ ಅನೇಕ ಕಾರ್ಯಕ್ರಮಗಳಲ್ಲಿ ಇದು ಒಂದಾಗಿದೆ. ಕೇರಳದಲ್ಲೂ ಕಾಂಗ್ರೆಸ್ ವಿರೋಧ ಪಕ್ಷದಲ್ಲಿದೆ, ಆದರೆ ಆಡಳಿತಾರೂಢ ಸಿಪಿಎಂ ಕೂಡ ಸಾಕ್ಷ್ಯಚಿತ್ರವನ್ನು ನಿಷೇಧಿಸುವ ವಿರುದ್ಧ ನಿಲುವು ತಳೆದಿದೆ.
ಕೇರಳದಲ್ಲಿ, ಹಿರಿಯ ನಾಯಕ ಎಕೆ ಆಂಟನಿ ಅವರ ಪುತ್ರ ಅನಿಲ್ ಕೆ ಆಂಟನಿ ಅವರು ಕಾಂಗ್ರೆಸ್ ನಿಲುವನ್ನು ಧಿಕ್ಕರಿಸಿ ಬಿಬಿಸಿ ಸಾಕ್ಷ್ಯಚಿತ್ರವನ್ನು ವಿರೋಧಿಸಿ ಟ್ವೀಟ್‌ ಮಾಡಿದ ನಂತರ “ಟ್ವಿಟ್ ಅನ್ನು ಹಿಂತೆಗೆದುಕೊಳ್ಳಲು ಒತ್ತಾಯ ಹಾಗೂ ನಿಂದನೆಯ ಕರೆಗಳು” ಎಂದು ಬಂದ ನಂತರ ಇತ್ತೀಚೆಗೆ ಪಕ್ಷಕ್ಕೆ ರಾಜೀನಾಮೆ ನೀಡಿದ ನಂತರ ಕಾಂಗ್ರೆಸ್‌ ಸಹ ಈಗ ಸಾಕ್ಷ್ಯಚಿತ್ರವು ಗದ್ದಲದ ಕೇಂದ್ರವಾಗಿದೆ.
ಇದು ಭಾರತದ ಸಾರ್ವಭೌಮತೆಗೆ ಧಕ್ಕೆ ತರುತ್ತದೆ ಎಂಬ ಅನಿಲ್ ಆಂಟೋನಿ ಅವರ ವಾದಕ್ಕೆ ಪ್ರತಿಕ್ರಿಯಿಸಿದ ತಿರುವನಂತಪುರಂನ ಲೋಕಸಭಾ ಸದಸ್ಯ, ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್, ಅವರ ವಾದವು “ಅಪ್ರಬುದ್ಧ” ಎಂದು ಹೇಳಿದ್ದಾರೆ.ನಮ್ಮ ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತ್ವವು ಸಾಕ್ಷ್ಯಚಿತ್ರದಿಂದ ಪ್ರಭಾವಿತವಾಗದಷ್ಟು ದುರ್ಬಲವಾಗಿದೆಯೇ? ಎಂದು ತರೂರ್ ಕೇಳಿದ್ದಾರೆ.
ಕೇರಳದ ರಾಜಧಾನಿ ತಿರುವನಂತಪುರಂನಲ್ಲಿರುವ ಶಾಂಗುಮುಖಂ ಬೀಚ್‌ನಲ್ಲಿ ಸಾಕ್ಷ್ಯಚಿತ್ರದ ಪ್ರದರ್ಶನ ನಡೆಯಿತು.

ಪ್ರಮುಖ ಸುದ್ದಿ :-   ಅಮೆರಿಕ ಮಾದರಿಯಲ್ಲಿ ಭಾರತದಲ್ಲೂ 50% ಉತ್ತರಾಧಿಕಾರ ತೆರಿಗೆ : ಸ್ಯಾಮ್ ಪಿತ್ರೊಡಾ ಹೇಳಿಕೆಯಿಂದ ವಿವಾದ ; ಬಿಜೆಪಿ ವಾಗ್ದಾಳಿ, ಇದು ನಮ್ಮ ಕಲ್ಪನೆಯಲ್ಲ ಎಂದ ಕಾಂಗ್ರೆಸ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement