ಮಂಗಳೂರು: ಅಪಾರ್ಟ್ಮೆಂಟಿನಲ್ಲಿ ದಂಪತಿ ಶವವಾಗಿ ಪತ್ತೆ

ಮಂಗಳೂರು: ಮಂಗಳೂರಿನ ಬಿಜೈನ ಅಪಾರ್ಟ್‌ಮೆಂಟ್‌ ಒಂದರಲ್ಲಿ ದಂಪತಿ ಶವವಾಗಿ ಪತ್ತೆಯಾಗಿದೆ.
ಮೃತರನ್ನು ಬಿಜೈ ನಿವಾಸಿಗಳಾದ ನಿವೃತ್ತ ಕೆನರಾ ಬ್ಯಾಂಕ್ ಮ್ಯಾನೇಜರ್ ದಿನೇಶ್ ರಾವ್ (65) ಹಾಗೂ ಶೈಲಜಾ (64) ಎಂದು ಗುರುತಿಸಲಾಗಿದೆ. ಶೈಲಜಾ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಹಾಸಿಗೆ ಹಿಡಿದಿದ್ದರು. ಇವರನ್ನು ನೋಡಿಕೊಳ್ಳಲು ರಾತ್ರಿ ಮತ್ತು ಬೆಳಿಗ್ಗೆ ಹೊತ್ತಿನಲ್ಲಿ ಇಬ್ಬರು ಹೋಮ್ ನರ್ಸ್‌ಗಳು ಬಂದು ಹೋಗುತ್ತಿದ್ದರು. ರಾತ್ರಿ ಕೆಲಸಕ್ಕೆ ಬಂದ ಹೋಂ ನರ್ಸ್ ಬೆಳಿಗ್ಗೆ ಮನೆಯಿಂದ ಹೋದ ನಂತರದಲ್ಲಿ ಹಗಲು ಹೊತ್ತಿನಲ್ಲಿ ಕೆಲಸ ನಿರ್ವಹಿಸುವ ಮತ್ತೊಬ್ಬರು ಹೋಂ ನರ್ಸ್ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ದಿನೇಶ ಅವರು ಪತ್ನಿ ಶೈಲಜಾ ಅವರನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುಬಹುದು ಎಂದು ಶಂಕೆ ವ್ಯಕ್ತವಾಗಿದೆ.
ದಿನೇಶ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಂಡತಿ ಮೃತಪಟ್ಟ ಪಕ್ಕದ ಕೋಣೆಯಲ್ಲಿ ಗಂಡ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ದಂಪತಿ ಮಾತ್ರ ವಾಸ ಮಾಡುತ್ತಿದ್ದು, ಮಕ್ಕಳು ಹೊರ ದೇಶದಲ್ಲಿ ಉದ್ಯೋಗದಲ್ಲಿದ್ದಾರೆ ಎನ್ನಲಾಗಿದೆ. ಉರ್ವ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ಧಾರೆ.

ಪ್ರಮುಖ ಸುದ್ದಿ :-   ನ್ಯಾಯಾಲಯದ ನಿರ್ದೇಶನ ಪಾಲಿಸಲು ನಿರ್ಲಕ್ಷ್ಯ: ರಾಜ್ಯ ಸರ್ಕಾರದ 41 ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌

 

3 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement