ದೇವರನ್ನು ಒಲಿಸಿಕೊಳ್ಳಲು ತನ್ನ ನಾಲಿಗೆಯನ್ನೇ ಕತ್ತರಿಸಿಕೊಂಡ ಭಕ್ತ…!

ಬಳ್ಳಾರಿ: ದೇವರನ್ನು ಒಲಿಸಿಕೊಳ್ಳಲು ವ್ಯಕ್ತಿಯೊಬ್ಬ (Man) ತನ್ನ ನಾಲಿಗೆಯನ್ನೇ (Tongue) ಕತ್ತರಿಸಿ ದಾನ ಕೊಟ್ಟ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ಉಪ್ಪಾರ ಹೊಸಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ದೇವರನ್ನು ಒಲಿಸಿಕೊಳ್ಳಲು ತನ್ನ ನಾಲಿಗೆಯನ್ನೇ ಕತ್ತರಿಸಿಕೊಂಡಿದ್ದಾನೆ ಎಂದು ಹೇಳಲಾದ ಘಟನೆ ವರದಿಯಾಗಿದೆ.
ವೀರೇಶ ಎಂಬಾತ ತನ್ನ ನಾಲಿಗೆಯನ್ನೇ ಕತ್ತರಿಸಿ ದೇವರಿಗೆ ಅರ್ಪಣೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ದೇವರು ತನ್ನ ನಾಲಿಗೆ ಕೇಳಿದೆ ಎಂದು ಹೇಳಿ ಚಾಕುವಿನಿಂದ ತನ್ನ ನಾಲಿಗೆಯನ್ನು ಕತ್ತರಿಸಿಕೊಂಡಿದ್ದಾನೆ. ಇದೇ ವ್ಯಕ್ತಿ ಒಂದು ವರ್ಷದ ಹಿಂದೆ ಬೆರಳು ಕಟ್ ಮಾಡಿಕೊಂಡು ದೇವರ ತಲೆಯ ಮೇಲೆ ಇಟ್ಟಿದ್ದ. ಈಗ ತನ್ನ ನಾಲಿಗೆ ಕಟ್​ ಮಾಡಿಕೊಂಡಿದ್ದಾನಂತೆ.
ಬಲಕುಂದಿ ಗ್ರಾಮದ ಗುಡ್ಡದ ಮೇಲೆ ಇರುವ ಶಂಕರಪ್ಪ ದೇವಸ್ಥಾನದಲ್ಲಿ ವೀರೇಶ ಪ್ರತಿ ದಿನ ಪೂಜೆ ಮಾಡುತ್ತಿದ್ದ. ದೇವರನ್ನು ಒಲಿಸಿಕೊಳ್ಳಲು ನಾಲಿಗೆ ಕತ್ತರಿಸಿಕೊಂಡಿದ್ದಾನೆ ಎನ್ನಲಾಗಿದ್ದು, ಸ್ಥಳೀಯರ ನೆರವಿನಿಂದ ತುಂಡಾದ ನಾಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಿಂದೆ ಬೆರಳು ತುಂಡಿರಿಸಿಕೊಂಡಿದ್ದ ಈತ ಈಗ ನಾಲಿಗೆ ಕಟ್‌ ಮಾಡಿಕೊಂಡಿದ್ದರಿಂದ ಅನೇಕರು ಈತನಿಗೆ ಮಾನಸಿಕ ಅಸ್ವಸ್ಥತೆ ಇರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement