ಖಾಸಗಿ ಬಸ್-ಬೈಕ್‌ ಡಿಕ್ಕಿ: ತಂದೆ-ಮಗಳು ಸಾವು

posted in: ರಾಜ್ಯ | 0

ತುಮಕೂರು: ಖಾಸಗಿ ಬಸ್ ಬೈಕ್‌ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ತಂದೆ-ಮಗಳು ಮೃತಪಟ್ಟ ಘಟನೆ ಭಾನುವಾರ (ಜನವರಿ 29) ಹೆಬ್ಬೂರಿನ ಬನ್ನಿಮರದಕಟ್ಟೆ ಬಳಿ ಸಂಭವಿಸಿದೆ.
ಮೃತರನ್ನು ತಿರುಮಲೇಗೌಡ (50), ಚಂದನ (20) ಎಂದು ಗುರುತಿಸಲಾಗಿದೆ. ಅಪಘಾತದ ಸ್ಥಳದಲ್ಲೇ ತಂದೆ ತಿರುಮಲೇಗೌಡ ಮೃತಪಟ್ಟಿದ್ದು, ಪುತ್ರಿ ಚಂದನಾ ಅವರಿಗೆ ಕುಣಿಗಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ತುಮುಕೂರು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಲಾಗಿದೆ. ನೆಟ್ಟಿಗೆರೆ ಗ್ರಾಮದ ನಿವಾಸಿಗಳಾಗಿದ್ದ ಇವರು ಬೆಂಗಳೂರಿನ ಸುಂಕದಕಟ್ಟೆಯಲ್ಲಿ ವಾಸವಾಗಿದ್ದರು.
ತಮ್ಮ ಊರಾದ ಗುಬ್ಬಿ ತಾಲೂಕಿನ ಸಿಎಸ್​ಪುರ ಬಳಿಯ ನೆಟ್ಟಿಗೆರೆ ಗ್ರಾಮದಲ್ಲಿ ಹಬ್ಬ ಮುಗಿಸಿಕೊಂಡು ಬೈಕ್​​ನಲ್ಲಿ ಬೆಂಗಳೂರಿಗೆ ವಾಪಸ್ ಹೋಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲಿಸಿದ್ದಾರೆ. ಮೃತದೇಹಗಳನ್ನು ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ. ಇನ್ನು ಈ ಬಗ್ಗೆ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಲಿಂಗಾಯತ, ಒಕ್ಕಲಿಗ ಸಮುದಾಯದ ಮೀಸಲಾತಿ ಹೆಚ್ಚಳ, ಎಸ್‌ಸಿ ಒಳ ಮೀಸಲಾತಿಗೆ ಸಚಿವ ಸಂಪುಟ ಒಪ್ಪಿಗೆ

4 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement