ನವದೆಹಲಿ: ಕಳೆದ ನವೆಂಬರ್ನಲ್ಲಿ ನ್ಯೂಯಾರ್ಕ್ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ಶಂಕರ ಮಿಶ್ರಾ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ.
ಸೋಮವಾರದಂದು ತೀರ್ಪು ಕಾಯ್ದಿರಿಸಿದ್ದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಹರ್ಜ್ಯೋತ್ ಸಿಂಗ್ ಭಲ್ಲಾ ಇಂದು, ಮಂಗಳವಾರ ಆದೇಶ ಪ್ರಕಟಿಸಿದರು.
ಶಂಕರ ಮಿಶ್ರಾ ₹ 1 ಲಕ್ಷ ಮೊತ್ತದ ಬಾಂಡ್ ಸಲ್ಲಿಸಿದ ಬಳಿಕ ಆತನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ನ್ಯಾಯಾಲಯ ಸೂಚಿಸಿತು.
ದೆಹಲಿ ಪೊಲೀಸರು ಜನವರಿ 7 ರಂದು ಬೆಂಗಳೂರಿನಲ್ಲಿ ಶಂಕರ ಮಿಶ್ರಾನನ್ನು ಬಂಧಿಸಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ