ಟ್ರಾಫಿಕ್​ ರೂಲ್ಸ್​ ಉಲ್ಲಂಘನೆ ದಂಡಕ್ಕೆ ಶೇಕಡಾ 50 ರಿಯಾಯಿತಿ; ಹಣ ಕಟ್ಟಲು ಮುಗಿಬಿದ್ದ ಜನ

posted in: ರಾಜ್ಯ | 0

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಯ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ ಘೋಷಿಸಿದ ಬೆನ್ನಲ್ಲೇ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ವಾಹನ ಸವಾರರು ಮುಗಿಬಿದ್ದಿದ್ದಾರೆ.
ನಗರ ಸಂಚಾರ ಪೊಲೀಸ್ ವತಿಯಿಂದ ಹೊರಡಿಸಲಾದ ಪ್ರಕಟಣೆಯಲ್ಲಿ ಬಾಕಿ ಇರುವ ದಂಡ ಪಾವತಿಯ ವಿಧಾನಗಳನ್ನು ವಿವರಿಸಲಾಗಿದೆ.
ವಾಹನ ಮಾಲೀಕರು ಮತ್ತು ಚಾಲಕರು ಕರ್ನಾಟಕ ಒನ್ ವೆಬ್‍ಸೈಟ್‍ನಲ್ಲಿ ವಿವರಗಳನ್ನು ಪಡೆದು ಅಥವಾ ಪೇಟಿಎಂ ಆ್ಯಪ್ ಮೂಲಕವೂ ದಂಡ ಪಾವತಿಸಬಹುದಾಗಿದೆ. ಅಲ್ಲದೆ, ಹತ್ತಿರದ ಸಂಚಾರ ಪೊಲೀಸ್ ಠಾಣೆಗೆ ತೆರಳಿ ವಾಹನ ನೋಂದಣಿ ಸಂಖ್ಯೆಗಳನ್ನು ತಿಳಿಸಿ ದಂಡ ಪಾವತಿಸಬಹುದಾಗಿದೆ.
ಶೇ.50ರಷ್ಟು ರಿಯಾಯ್ತಿ ಸೌಲಭ್ಯ ಫೆಬ್ರವರಿ 11ರ ವರೆಗೆ ಮಾತ್ರ ಇರಲಿದೆ. ಅನಂತರ ಉಳಿಯುವ ಪ್ರಕರಣಗಳಲ್ಲಿ ಪೂರ್ಣ ಪ್ರಮಾಣದ ದಂಡ ಪಾವತಿಸಬೇಕಾಗುತ್ತದೆ. ಹೀಗಾಗಿ ಬೆಂಗಳೂರಿನ ಬಹುತೇಕ ಸಂಚಾರಿ ಪೊಲೀಸ್ ಠಾಣೆಗಳಲ್ಲಿ ಜನ ಸಾಲಿನಲ್ಲಿ ನಿಂತು ದಂಡ ಪಾವತಿಸುವ ಮೂಲಕ ಬಾಕಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳುತ್ತಿದ್ದಾರೆ.
ಕೆಲವು ವಾಹನಗಳ ಮೇಲೆ 10ಸಾವಿರಕ್ಕೂ ಮೇಲ್ಪಟ್ಟ ದಂಡವಿದ್ದು, ಅಂತಹವರಿಗೆ ರಿಯಾಯ್ತಿ ಸೌಲಭ್ಯ ಅನುಕೂಲ ಒದಗಿಸಿಕೊಟ್ಟಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

ಇಂದಿನ ಪ್ರಮುಖ ಸುದ್ದಿ :-   ಯಾವುದೇ ಸಮಯದಲ್ಲಿ ಕರ್ನಾಟಕ ವಿಧಾನಸಭೆಗೆ ಚುನಾವಣೆ ಘೋಷಣೆ ಸಾಧ್ಯತೆ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಚುನಾವಣಾ ಆಯೋಗದ ಸೂಚನೆ

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement