ಫೆಬ್ರವರಿ ಕೊನೆಯೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಘೋಷಣೆ ಸಾಧ್ಯತೆ: ಬಿ.ಕೆ ಹರಿಪ್ರಸಾದ

posted in: ರಾಜ್ಯ | 0

ಉಡುಪಿ : ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಫೆಬ್ರವರಿ ತಿಂಗಳ ಕೊನೆಯೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ ಹೇಳಿದ್ದಾರೆ.
ಇಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅಭ್ಯರ್ಥಿಗಳ ಪಟ್ಟಿಗಳು ಈಗಾಗಲೇ ನಿನ್ನೆ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ 37 ಜನರ ಸಮ್ಮುಖ ಬಂದಿದ್ದು, ನಿನ್ನೆ ಸಂಜೆ ನಾಲ್ಕು ಗಂಟೆಯವರೆಗೂ ಸುದೀರ್ಘವಾಗಿ ಚರ್ಚೆ ಮಾಡಲಾಗಿದೆ. ಎಲ್ಲರು ಅನಿಸಿಕೆ, ಶಿಫಾರಸುಗಳನ್ನು ಕೊಟ್ಟಿದ್ದಾರೆ, ಮುಂದಿನ ಹಂತದಲ್ಲಿ ಸ್ಕ್ರೀನಿಂಗ್ ಕಮಿಟಿ ಮುಂದೆ ಹೋಗಲಿದೆ. ಸ್ಕ್ರೀನಿಂಗ್ ಕಮಿಟಿಯಲ್ಲಿ ಆಯ್ಕೆಯಾಗಬೇಕು, ಅದರಲ್ಲಿ ಮೂವರು ಎಐಸಿಸಿಯವರು ಇರಲಿದ್ದು ಸ್ಕ್ರೀನಿಂಗ್ ಕಮಿಟಿ ಅಂತಿಮಗೊಳಿಸಿದ ಮೇಲೆ ಸೆಂಟ್ರಲ್ ಎಲೆಕ್ಷನ್ ಕಮಿಟಿಗೆ ಹೋಗುತ್ತದೆ. ಎಐಸಿಸಿ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಲಿದೆ ಎಂದರು.
ರಾಕ್ಯದಲ್ಲಿ ಅತಂತ್ರ ಸರ್ಕಾರ ಬಂದರೆ ಕುದುರೆ ವ್ಯಾಪಾರಕ್ಕೆ ಅವಕಾಶವಾಗಲಿದ್ದು ಈ ಬಾರಿ ಯಾವುದೇ ಕಾರಣಕ್ಕೂ ಅತಂತ್ರ ಸರ್ಕಾರ ಬರುವುದಿಲ್ಲವೆಂದು ವಿಶ್ವಾಸವಿದೆ. ಜನರಿಗೆ ಬಿಜೆಪಿ ಸರ್ಕಾರದಿಂದ ಭ್ರಮನಿರಸನವಾಗಿದೆ, ಆದ್ದರಿಂದ ಕಾಂಗ್ರೆಸ್ ಗೆ ಸ್ಪಷ್ಟವಾದ ಬಹುಮತ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಎಸ್‌ಟಿ, ಎಸ್‌ಸಿ ಮೀಸಲಾತಿ ವಿಳಂಬ ಖಂಡಿಸಿ ರಾಜಭವನ ಚಲೋ : ಸಿದ್ದರಾಮಯ್ಯ, ಡಿಕೆಶಿ ಪೊಲೀಸ್ ವಶಕ್ಕೆ

 

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement