ಬೆಂಗಳೂರು : ಬೆಂಗಳೂರಿನ ಟ್ರಾಫಿಕ್ನಲ್ಲಿ ಆಂಬುಲೆನ್ಸ್ ಸಿಲುಕಿದ ಹಿನ್ನೆಲೆಯಲ್ಲಿ ಆಂಬುಲೆನ್ಸ್ ಆಸ್ಪತ್ರೆ ತಲುಪಲು ವಿಳಂಬವಾಗಿ ತುರ್ತು ಚಿಕಿತ್ಸೆ ಸಿಗದೆ ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ವರದಿಯಾಗಿದೆ.
ಅಪಘಾತದಲ್ಲಿ ಗಾಯಗೊಂಡಿದ್ದ ಹುದಾ ಕೌಸರ್ ಎಂಬ ಒಂದೂವರೆ ವರ್ಷದ ಮಗು ನೆಲಮಂಗಲದ ಬಳಿ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿಕೊಂಡು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಹೋಗಲಾಗದೆ ಚಿಕಿತ್ಸೆ ದೊರಕದೆ ಮೃತಪಟ್ಟಿದೆ. ನಿನ್ನೆ ತುಮಕೂರು ಜಿಲ್ಲೆ ತಿಪಟೂರಿನ ಕೈಮರಾ ಬಳಿ ಬುಲೆರೋ ವಾಹನ ಹಾಗು ಬೈಕ್ ನಡುವೆ ಅಪಘಾತ ಸಂಭವಿಸಿ ಅಹಮದ್, ರುಕ್ಸಾನಾ ದಂಪತಿ ಹಾಗೂ ಪುತ್ರಿ ಹುದಾ ಕೌಸರ್ ಗಾಯಗೊಂಡಿದ್ದರು.
ಈ ವೇಳೆ ತಂದೆ ಅಹಮದ್, ತಾಯಿ ರುಕ್ಸಾನಾಗೆ ತಿಪಟೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಹಾಸನ ಹಿಮ್ಸ್ ಗೆ ರವಾನಿಸಲಾಗಿತ್ತು. ಬಳಿಕ ಹಿಮ್ಸ್ನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಗುವನ್ನು ಬೆಂಗಳೂರಿಗೆ ಜಿರೋ ಟ್ರಾಫಿಕ್ ಮೂಲಕ ನೆಲಮಂಗಲವರೆಗೂ ಆ್ಯಂಬುಲೆನ್ಸ್ ಬೇಗ ಬಂದಿತ್ತು. ಆದರೆ ನೆಲಮಂಗಲ ಬಳಿ ಆಂಬುಲೆನ್ಸ್ ಟ್ರಾಫಿಕ್ನಲ್ಲಿ ಸಿಲುಕಿದೆ. ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ತಲುಪಲು ಸಾಧ್ಯವಾಗದೆ ಮಗು ಮೃತಪಟ್ಟಿದೆ. ಮಗುವನ್ನು ಕಳೆದುಕೊಂಡು ನಡು ರಸ್ತೆಯಲ್ಲೇ ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ