ಇಂಧನ ಉತ್ಪಾದನೆ-ವಿತರಣೆಯಲ್ಲಿ ವಿಶ್ವದ ಪ್ರಮುಖ ಶಕ್ತಿಗಳ ಪೈಕಿ ಭಾರತವೂ ಒಂದು: ಪ್ರಧಾನಿ ಮೋದಿ

ಬೆಂಗಳೂರು: ಇಂಧನ ಉತ್ಪಾದನೆ ಮತ್ತು ವಿತರಣೆಯಲ್ಲಿ ಭಾರತವು ವಿಶ್ವದ ಅತ್ಯಂತ ಮುಂದುವರಿದ ಶಕ್ತಿಗಳ ಪೈಕಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಇಂಡಿಯನ್ ಎನರ್ಜಿ ವೀಕ್-2023 ಉದ್ಘಾಟಿಸಿ ಮಾತನಾಡಿದ ಅವರು, ಗ್ರೀನ್ ಹೈಡ್ರೋಜನ್ ಕ್ಷೇತ್ರದಲ್ಲಿ ಭಾರತವು ವಿಶ್ವದಲ್ಲಿಯೇ ಮುಂಚೂಣಿಯಲ್ಲಿದೆ. 2030ರಲ್ಲಿ 4 ಎಂಎಂಟಿ ಯಷ್ಟು ಗ್ರೀನ್ ಹೈಡ್ರೋಜನ್ ಉತ್ಪಾದಿಸುತ್ತೇವೆ. ಇದಕ್ಕಾಗಿ 8 ಲಕ್ಷ ಕೋಟಿಗೂ ಹೆಚ್ಚು ಹೂಡಿಕೆ ಮಾಡಲಿದ್ದೇವೆ. ಸಿಎನ್‌ಜಿ ಸ್ಟೇಷನ್‌ಗಳು 2014ಲ್ಲಿ 900 ಇತ್ತು. ಆದರೆ ಈಗ 5000ಕ್ಕೆ ತಲುಪಿದೆ. ಗ್ಯಾಸ್ ಪೈಪ್ಲೈನ್ ಜಾಲ ವಿಸ್ತರಿಸಲು ಶ್ರಮಿಸುತ್ತಿದ್ದೇವೆ. 2014ರಲ್ಲಿ 14 ಸಾವಿರ ಕಿಮೀ ಪೈಪ್ಲೈನ್ ಇತ್ತು. ಈಗ 20 ಸಾವಿರ ಕಿಮೀ ದಾಟಿದೆ.
ಸೌರಶಕ್ತಿ ಉತ್ಪಾದನೆ ಶೇ 20ರಷ್ಟು ಹೆಚ್ಚಾಗಿದ್ದು, ಪವನ ವಿದ್ಯುತ್ ಉತ್ಪಾದನೆಯಲ್ಲಿ ಭಾರತವು ವಿಶ್ವದಲ್ಲಿ 4ನೇ ಸ್ಥಾನದಲ್ಲಿದೆ. ಈ ದಶಕದ ಅಂತ್ಯದಲ್ಲಿ ಒಟ್ಟು ವಿದ್ಯುತ್ ಉತ್ಪಾದನೆಯಲ್ಲಿ ಅರ್ಧದಷ್ಟನ್ನು ಪರಿಸರಸ್ನೇಹಿ ಮೂಲಗಳಿಂದಲೂ ಉತ್ಪಾದಿಸುವ ಗುರಿ ಇರಿಸಿಕೊಂಡಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು.
ಐಎಂಎಫ್ 2023ರ ಪ್ರಗತಿಯ ಮುನ್ಸೂಚನೆಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಭಾರತ ದೇಶ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಗಳಲ್ಲಿ ಸ್ಥಾನ ಪಡೆದಿದೆ. ಕೋವಿಡ್ ಸಾಂಕ್ರಾಮಿಕ ಮತ್ತು ರಷ್ಯಾ-ಉಕ್ರೇನ್ ಯುದ್ಧದ ಬಿಕ್ಕಟ್ಟಿನ ನಡೆವೆಯೂ ಭಾರತ ಈ ಪ್ರಗತಿ ಸಾಧಿಸಿದೆ ಎಂದು ಹೇಳಿದರು
ಈಗ ದೇಶದಲ್ಲಿ ಕಠಿಣ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವಿರುವ ಸರ್ಕಾರವಿದೆ. ಹೀಗಾಗಿಯೇ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕೆಲವೇ ವರ್ಷಗಳಲ್ಲಿ ಅಭಿವೃದ್ಧಿಗೆ ಪೂರಕವಾಗುವ ಮಹತ್ವದ ಬದಲಾವಣೆಗಳು ಕಂಡು ಬಂದಿದ್ದು, ಇದರ ಫಲಾನುಭವಿಗಳ ಸಂಖ್ಯೆ ಹಲವು ಅಭಿವೃದ್ಧಿ ಹೊಂದಿದ ದೇಶಗಳ ಒಟ್ಟು ಜನಸಂಖ್ಯೆಗಿಂತಲೂ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು

ಹಳ್ಳಿಹಳ್ಳಿಗಳಲ್ಲಿ ಇಂಟರ್ನೆಟ್ ತಲುಪಿದ್ದು,.ಇದಕ್ಕಾಗಿ 5 ಲಕ್ಷ ಕಿಮೀಗೂ ಹೆಚ್ಚು ಉದ್ದದಷ್ಟು ಆಪ್ಟಿಕಲ್ ಫೈಬರ್ ಗಳನ್ನು ಅಳವಡಿಕೆ ಮಾಡಲಾಗಿದೆ .
ಬ್ರಾಡ್ಬಾಂಡ್ ಬಳಕೆದಾರರ ಸಂಖ್ಯೆಯೂ ಕೂಡಾ 13 ಪಟ್ಟು ಹೆಚ್ಚಾಗಿದ್ದು, ಇಂಟರ್ನೆಟ್ ಬಳಕೆ ಪ್ರಮಾಣ 3 ಪಟ್ಟು ಹೆಚ್ಚಾಗಿದೆ. ಬಡವರ್ಗದಲ್ಲಿದ್ದವರು ಮಧ್ಯಮವರ್ಗಕ್ಕೆ ಬಂದಿದ್ದಾರೆ. ಜೊತೆಗೆ ಮೊಬೈಲ್ ಫೋನ್ ಉತ್ಪಾದನೆಯಲ್ಲೂ ಭಾರತವು ಮುಂಚೂಣಿಗೆ ಬಂದಿದೆ ಎಂದು ಹೇಳಿದರು.
ಭಾರತದಲ್ಲಿ ಇಂಧನದ ಬೇಡಿಕೆ ಹೆಚ್ಚಾಗುತ್ತಿದ್ದು, ಅಭಿವೃದ್ಧಿಯ ವೇಗವನ್ನು ಗಮನಿಸಿದರೆ ಬರುವ ವರ್ಷಗಳಲ್ಲಿ ಭಾರತದಲ್ಲಿ ಹಲವಾರು ಹೊಸ ನಗರಗಳು ತಲೆಎತ್ತಲಿವೆ. ಅಂತಾರಾಷ್ಟ್ರೀಯ ಸಂಸ್ಥೆಯು ಇದೇ ಮಾತನ್ನು ಹೇಳಿದೆ. ಈ ದಶಕದಲ್ಲಿ ಭಾರತದಲ್ಲಿ ಇಂಧನದ ಬೇಡಿಕೆಯು ವಿಶ್ವದಲ್ಲಿಯೇ ಅತ್ಯಂತ ಹೆಚ್ಚಾಗಲಿದೆ. ಹೀಗಾಗಿಯೇ ಹೂಡಿಕೆದಾರರು ಹಾಗೂ ಸಹವರ್ತಿಗಳಿಗೆ ಹೊಸ ಅವಕಾಶಗಳು ಲಭ್ಯವಾಗಲಿವೆ.
ದೇಶದಲ್ಲಿರುವ ಪೆಟ್ರೋಲಿಯಂ ಸಂಸ್ಕರಣಾ ಸಂಗ್ರಹಾರಗಳ ತಂತ್ರಜ್ಞಾನವನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಅಷ್ಟು ಮಾತ್ರವಲ್ಲ, ದೇಶದಲ್ಲಿ ಸ್ಟಾರ್ಟ್‌ ಅಪ್‌ಗಳಿಗೆ ಹೆಚ್ಚು ಉತ್ತೇಜನವಿದ್ದು, ಇಲ್ಲಿನ ಇಂಧನ ಕ್ಷೇತ್ರದ ವಿಕಸನದ ಸಹಭಾಗಿಗಳಾಗಬಹುದು. ನಮ್ಮ ‘ಒನ್ ನೇಷನ್, ಒನ್ ಗ್ರಿಡ್’ ಆಶಯ ಸಾಕಾರಗೊಳಿಸಲು ಸತತ ಪ್ರಯತ್ನಗಳು ನಡೆಯುತ್ತಿವೆ ಎಂದು ಭವಿಷ್ಯ ಭಾರತದ ವಿಕಸನದ ಬಗ್ಗೆ ಹೇಳಿದರು.

ಪ್ರಮುಖ ಸುದ್ದಿ :-   ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು

ರಾಜ್ಯದಲ್ಲಿ 15000 ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ ಉತ್ಪಾದನೆ
ಕರ್ನಾಟಕದಲ್ಲಿ 15,000 ಮೆಗಾ ವ್ಯಾಟ್‌ ನವೀಕರಿಸಬಹುದಾದ ಇಂಧನ ಉತ್ಪಾದಿಸಲಾಗುತ್ತಿದ್ದು, ಮುಂದಿನ 5 ವರ್ಷ ನವೀಕರಿಸಬಹುದಾದ ಇಂಧನ ಉತ್ಪಾದನೆ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿ ಇರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ದೇಶದ ಶೇ. 50 ರಷ್ಟು ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಕರ್ನಾಟಕ ದೇಶದಲ್ಲಿ ಪ್ರಥಮ ಸ್ಥಾನದಲ್ಲಿದೆ. ನವೀಕರಿಸಬಹುದಾದ ಇಂಧನವನ್ನು ಸಂಗ್ರಹಿಸಲು ಪಂಪ್ ಸ್ಟೋರೇಜ್ ಸೇರಿದಂತೆ ವಿವಿಧ ರೀತಿಯ ಸಂಗ್ರಹಣೆಯತ್ತ ರಾಜ್ಯ ಗಮನ ಹರಿಸುತ್ತಿದೆ ಎಂದರು.
ಕಳೆದ ತಿಂಗಳು ಆಯೋಜಿಸಿದ್ದ ಬಂಡವಾಳ ಹೂಡಿಕೆ ಸಮಾವೇಶದಲ್ಲಿ, ಸುಮಾರು 9 ಉದ್ದಿಮೆಗಳು ಗ್ರೀನ್ ಹೈಡ್ರೊಜನ್‌ ವಿದ್ಯುತ್‌ ಉತ್ಪಾದನೆಗೆ 3ಲಕ್ಷ ಕೋಟಿ ಬಂಡವಾಳ ಹರಿದು ಬಂದಿದ್ದೆ. ಅದರಲ್ಲಿ ಸುಮಾರು 2 ಲಕ್ಷ ಕೋಟಿ ನವೀಕರಿಸಬಹುದಾದ ಇಂಧನ ಉತ್ಪಾದನೆ ಕ್ಷೇತ್ರಕ್ಕೆ ಅವಕಾಶ ಕಲ್ಪಿಸಿದೆ ಎಂದರು.

 

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement