ಮಾರಕಾಸ್ತ್ರ ಹಿಡಿದು ಜನರಿಗೆ ಹೆದರಿಸುತ್ತಿದ್ದ ವ್ಯಕ್ತಿಯ ಮೇಲೆ‌ ಪೊಲೀಸರಿಂದ ಫೈರಿಂಗ್

ಕಲಬುರಗಿ : ನಗರದ ಸೂಪರ್ ಮಾರ್ಕೆಟ್‌ನಲ್ಲಿ ಭಾನುವಾರ ರಾತ್ರಿ ಮಾರಕಾಸ್ತ್ರ ಹಿಡಿದು ಜನರಿಗೆ ಹೆದರಿಸುತ್ತಿದ್ದ ವ್ಯಕ್ತಿಯ ಮೇಲೆ‌ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ತಗುಲಿ ಗಾಯಗೊಂಡ ಅಬ್ದುಲ ಜಾಫರ್ ಸಾಬ್ ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಲಬುರಗಿ ನಗರದ ಸೂಪರ್ ಮಾರ್ಕೇಟ್‌ನಲ್ಲಿ ಈ ವ್ಯಕ್ತಿ ಮಾರಕಾಸ್ತ್ರಗಳನ್ನು ಹಿಡಿದು ಅನೇಕರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಸುಮಾರು ಒಂದು ತಾಸು ಕಾಲ ತಲವಾರ್‌ ಹಿಡಿದು ಸಾರ್ವಜನಿಕರನ್ನು ಹೆದರಿಸುತ್ತಿದ್ದ. ಮಾಹಿತಿ ಗೊತ್ತಾಗಿ ಪೊಲೀಸರು ಆಗಮಿಸಿದ್ದಾರೆ. ಹಾಗೂ ಆತನಿಗೆ ಶರಣಾಗಲು ತಿಳಿಸಿದ್ದಾರೆ. ಆದರೂ ಆತ ತಲವಾರ್‌ನಿಂದ ಹೆದರಿಸುವುದನ್ನು ಮುಂದುವರಿಸಿದ್ದಾನೆ. ಶರಣಾಗಲು ತಿಳಿಸಿದ ಪೊಲೀಸರ ಮೇಲೆಯೂ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಚೌಕ್ ಠಾಣೆ ಪಿಎಸ್ಐ ವಹೀದ್ ಕೊತ್ವಾಲ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ತಕ್ಷಣವೇ ಆರೋಪಿ ಕುಸಿದುಬಿದ್ದಿದ್ದಾನೆ. ತಕ್ಷಣವೇ ಬಂಧಿಸಿದ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement