ಅಂಬಲಿ ಹಳಸೀತು ಕಂಬಳಿ ಬೀಸಿತಲೇ ಪರಾಕ್’; ಕಾರಣಿಕ ವಾಣಿ

ವಿಜಯನಗರ : ‘ಅಂಬಲಿ ಹಳಸಿತು, ಕಂಬಳಿ ಬೀಸಿತಲೇ ಪರಾಕ್’ ಎಂದು ಕರ್ನಾಟಕದ ವಿಜಯನಗರ ಜಿಲ್ಲೆಯ ಐತಿಹಾಸಿಕ ಶ್ರೀ ಕ್ಷೇತ್ರ ಮೈಲಾರಲಿಂಗೇಶ್ವರ ವಾರ್ಷಿಕೋತ್ಸವದಲ್ಲಿ ಗೊರವಯ್ಯ ರಾಮಪ್ಪಜ್ಜ ಕಾರಣಿಕ  ನುಡಿದಿದ್ದಾರೆ.
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಮೈಲಾರಲಿಂಗೇಶ್ವರ ವಾರ್ಷಿಕೋತ್ಸವ ಇಂದು, ಮಂಗಳವಾರ ಅದ್ಧೂರಿಯಾಗಿ ನಡೆಯಿತು. ಗೊರವಯ್ಯ ರಾಮಪ್ಪಜ್ಜ 11 ದಿನಗಳ ಕಾಲ ಉಪವಾಸವಿದ್ದು 14 ಅಡಿ ಎತ್ತರದ ಮೈಲಾರದ ಡಂಕಣಮರಡಿಯಲ್ಲಿ ಬಿಲ್ಲನ್ನೇರಿ ಅಂಬಲಿ ಹಳಸೀತು, ಕಂಬಳಿ ಬೀಸಿತಲೆ ಪರಾಕ್ ಎಂಬುದಾಗಿ ಕಾರಣಿಕ  ನುಡಿದ್ದಾರೆ.
ದೇಗುಲದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್​ ಅವರು ಕಾರಣಿಕವನ್ನು ವಿಶ್ಲೇಷಣೆ ಮಾಡಿ ಹೇಳಿದ್ದು, ಪ್ರಾಮಾಣಿಕ, ನಿಷ್ಠೆಯಿಂದ ಇರುವ ವ್ಯಕ್ತಿ ರಾಜ್ಯ, ರಾಷ್ಟ್ರವನ್ನು ಆಳುತ್ತಾನೆ. ಮಳೆ, ಬೆಳೆ ಹೆಚ್ಚಾಗಿ ನಾಡಿಗೆ ಸಮೃದ್ಧಿಯಾಗಲಿದೆ, ಇದರ ಜೊತೆಗೆ ಮಳೆಯೂ ಜಾಸ್ತಿಯಾಗಿ ಬೆಳೆ ಹಾನಿಯಾಗಲಿದೆ ಎಂದು ಹೇಳಿದ್ದಾರೆ.

 

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement