ಹೊನ್ನಾವರ: ಕಾಸರಕೋಡ ಇಕೋ ಬೀಚ್ ಬಳಿ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಕಾಸರಕೋಡ ಇಕೋ ಬೀಚ್ ಬಳಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಮೃತವ್ಯಕ್ತಿ ಕುಮಟಾ ತಾಲೂಕಿನ ನಾಡುಮಾಸ್ಕೇರಿ ಮೂಲದ ರಾಮ ನಾಗೇಶ ಗೌಡ (೩೨). ಇವರು ೨೦೧೭ರ ಸಾಲಿನಲ್ಲಿ ಪೊಲೀಸ್ ಇಲಾಖೆಗೆ ನೇಮಕಗೊಂಡಿದ್ದರು ಎಂದು ಹೇಳಲಾಗಿದೆ.
ಮಂಗಳವಾರ ಮುಂಜಾನೆ ಸಮಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ಕೇಸರಿ ಬಣ್ಣದ ಶರ್ಟ್ ಹಾಗೂ ಕಪ್ಪು ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಸಮೀಪದಲ್ಲಿ ಬ್ಯಾಗ ಕೂಡ ಪತ್ತೆಯಾಗಿದೆ. ಹೊನ್ನಾವರ ಪಿ.ಎಸ್.ಐ. ಪ್ರವೀಣಕುಮಾರ, ಹಾಗೂ ಆರ್.ಎಫ್.ಒ ವಿಕ್ರಂ ರೆಡ್ಡಿ, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆನ್‌ಲೈನ್‌ ಆಟದಲ್ಲಿ ಆದ ನಷ್ಟ ಹಾಗೂ ಸಾಲದ ಬಾಧೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement