ಭೂಕಂಪ ಪೀಡಿತ ಟರ್ಕಿಯಲ್ಲಿ ಬೆಂಗಳೂರು ಕಂಪನಿಯ ಉದ್ಯೋಗಿ ನಾಪತ್ತೆ: ಕೇಂದ್ರ

ನವದೆಹಲಿ: ಬೆಂಗಳೂರು ಮೂಲದ ಕಂಪನಿಯೊಂದರ ಉದ್ಯೋಗಿಯೊಬ್ಬರು ಭೂಕಂಪ ಪೀಡಿತ ಟರ್ಕಿಯ ಮಾಲತ್ಯದಲ್ಲಿ ನಾಪತ್ತೆಯಾಗಿದ್ದಾರೆ.
ಎಂಇಎ ಕಾರ್ಯದರ್ಶಿ (ಪಶ್ಚಿಮ) ಸಂಜಯ್ ವರ್ಮಾ ಅವರು ಬುಧವಾರ ನವದೆಹಲಿಯಲ್ಲಿ ಮಾತನಾಡಿ, ಭಾರತದ ಪ್ರಜೆಯೊಬ್ಬರು ಆಗ್ನೇಯ ಟರ್ಕಿಯಲ್ಲಿರುವ ಮಾಲತ್ಯಕ್ಕೆ ವ್ಯಾಪಾರ ಪ್ರವಾಸದಲ್ಲಿದ್ದರು, ಕಳೆದ ಎರಡು ದಿನಗಳಿಂದ ಅವರು ಪತ್ತೆಯಾಗಿಲ್ಲ, ನಾವು ಅವರ ಕುಟುಂಬ ಮತ್ತು ಬೆಂಗಳೂರಿನಲ್ಲಿರುವ ಕಂಪನಿಯೊಂದಿಗೆ ಸಂಪರ್ಕದಲ್ಲಿದ್ದೇವೆ” ಎಂದು ವರ್ಮಾ ಹೇಳಿದರು.
ಸೋಮವಾರ ಮುಂಜಾನೆ ಟರ್ಕಿ ಮತ್ತು ಸಿರಿಯಾವನ್ನು ನಡುಗಿಸಿದ ವಿನಾಶಕಾರಿ ಭೂಕಂಪಗಳಿಂದ ತೀವ್ರವಾಗಿ ಹಾನಿಗೊಳಗಾದ ನಗರಗಳಲ್ಲಿ ಮಾಲತ್ಯವೂ ಒಂದು. ಇವರಲ್ಲದೆ ಒಟ್ಟು 10 ಮಂದಿ ಭಾರತೀಯ ಭೂಕಂಪ ಪೀಡಿತ ಟರ್ಕಿಯಲ್ಲಿ ಸಿಲುಕಿಕೊಂಡಿದ್ದಾರೆ, ಆದರೆ ಸುರಕ್ಷಿತವಾಗಿದ್ದಾರೆ ಎಂದು ಅವರು ಹೇಳಿದರು.
ಅಂಕಾರದಲ್ಲಿರುವ ಭಾರತದ ರಾಯಭಾರ ಕಚೇರಿಯು ಟರ್ಕಿಯ ಭೂಕಂಪ ಪೀಡಿತ ಪ್ರದೇಶದಲ್ಲಿ, ವಿಶೇಷವಾಗಿ ಅದಾನ, ಗಾಜಿಯಾಂಟೆಪ್, ಮಲತ್ಯಾ ಮತ್ತು ಕಹ್ರಮನ್‌ಮರಸ್ ಪ್ರಾಂತ್ಯಗಳಲ್ಲಿ ಭೂಕಂಪದಿಂದಾಗಿ ಹೆಚ್ಚು ಹಾನಿಗೊಳಗಾದ ಭಾರತದ ನಾಗರಿಕರ ಯೋಗಕ್ಷೇಮದ ಬಗ್ಗೆ ಪರಿಶೀಲಿಸುತ್ತಿದೆ. ರಾಯಭಾರ ಕಚೇರಿಯು ಸಹಾಯ ಕೇಂದ್ರವನ್ನು ಸ್ಥಾಪಿಸಿದೆ.
ದೂರದ ಪ್ರದೇಶಗಳಲ್ಲಿ ಸಿಲುಕಿರುವ 10 ಭಾರತೀಯರು ಸುರಕ್ಷಿತವಾಗಿದ್ದಾರೆ. ನಮಗೆ ಸುಮಾರು 75 ಜನರಿಂದ ಕರೆಗಳು ಬಂದಿದ್ದು, ಭಾರತ ಸರ್ಕಾರವನ್ನು ಸಂಪರ್ಕಿಸಿದ ಮೂವರು ಭಾರತೀಯರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಯಿತು ಎಂದು ವರ್ಮಾ ಹೇಳಿದ್ದಾರೆ.
ಸುಮಾರು 3,000 ಭಾರತೀಯರು ಟರ್ಕಿಯಲ್ಲಿ ನೆಲೆಸಿದ್ದಾರೆ, ಅವರಲ್ಲಿ ಸುಮಾರು 1,800 ಜನರು ಇಸ್ತಾಂಬುಲ್ ಮತ್ತು ಸುತ್ತಮುತ್ತ ಮತ್ತು 250 ಅಂಕಾರಾದಲ್ಲಿ ವಾಸಿಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ | ಆರೋಪಿಗಳಿಗೆ ಜಾಮೀನು; ಹಿಂಬಾಲಕರೊಂದಿಗೆ ರೋಡ್ ಶೋ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement