ಭೂಕಬಳಿಕೆ ಪ್ರಕರಣದಲ್ಲಿ ಟಾಲಿವುಡ್ ಸ್ಟಾರ್ ನಟ ರಾಣಾ ದಗ್ಗುಬಾಟಿ, ತಂದೆಯ ಹೆಸರು

ಹೈದರಾಬಾದ್: ಟಾಲಿವುಡ್ ಖ್ಯಾತ ನಟ ರಾಣಾ ದಗ್ಗುಬಾಟಿ ಮತ್ತು ಅವರ ತಂದೆ, ಖ್ಯಾತ ಚಲನಚಿತ್ರ ನಿರ್ಮಾಪಕ ಡಿ.ಸುರೇಶಬಾಬು ಭೂಕಬಳಿಕೆ ಆರೋಪದ ಪ್ರಕರಣದಲ್ಲಿ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸ್ಥಳೀಯ ಉದ್ಯಮಿ ಪ್ರಮೋದಕುಮಾರ ಅವರು ‘ಬಾಹುಬಲಿ’ ನಟ ಮತ್ತು ಅವರ ತಂದೆಯ ಹೆಸರನ್ನು ದೂರಿನಲ್ಲಿ ಹೆಸರಿಸಿದ್ದು, ತಂದೆ ಮತ್ತು ಮಗ ತನಗೆ ಸೇರಿದ ಭೂಮಿಯನ್ನು ತೆರವು ಮಾಡುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಸಂಬಂಧ ನಗರದ ನಾಂಪಲ್ಲಿ ಮೂರನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅವರಿಗೆ ಸಮನ್ಸ್ ಜಾರಿ ಮಾಡಿದೆ.
ದೂರಿನ ಪ್ರಕಾರ, ಶೇಕ್‌ಪೇಟೆಯಲ್ಲಿರುವ ವಿವಾದಿತ ಜಮೀನನ್ನು ಸುರೇಶಬಾಬು ಎಂಬುವರು 2014ರಲ್ಲಿ ತನಗೆ ಲೀಸ್‌ಗೆ ನೀಡಿದ್ದರು. ಗುತ್ತಿಗೆ ಅವಧಿ ಮುಗಿದ ನಂತರ ಸುರೇಶ್ ಬಾಬು ಅವರಿಗೆ ಆಸ್ತಿಯನ್ನು 18 ಕೋಟಿ ರೂ.ಗೆ ಮಾರಾಟ ಮಾಡಲು ನಿರ್ಧರಿಸಿ ಡೀಲ್ ನಡೆದಿತ್ತು.
ಡೀಲ್‌ಗೆ 5 ಕೋಟಿ ರೂಪಾಯಿ ಪಾವತಿ ಮಾಡಿದ್ದರೂ, ಮಾರಾಟ ಮತ್ತು ನೋಂದಣಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಸುರೇಶಬಾಬು ತಲೆಕೆಡಿಸಿಕೊಂಡಿಲ್ಲ ಎಂದು ಪ್ರಮೋದಕುಮಾರ ಹೇಳಿಕೊಂಡಿದ್ದಾರೆ. ಸಮಸ್ಯೆ ಬಗೆಹರಿಯುವ ಮುನ್ನವೇ ಸುರೇಶ್ ಬಾಬು ತಮ್ಮ ಪುತ್ರ ರಾಣಾ ಹೆಸರಿಗೆ ಆಸ್ತಿಯನ್ನು ವರ್ಗಾಯಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   ತಪ್ಪು ಮಾಹಿತಿ ನೀಡಲಾಗಿದೆ : ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಮೋದಿ ಭೇಟಿಗೆ ಸಮಯಾವಕಾಶ ಕೋರಿ ಬಹಿರಂಗ ಪತ್ರ ಬರೆದ ಖರ್ಗೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement