ಕೊಡಗು: ಹುಲಿ ದಾಳಿಗೆ ಮತ್ತೊಬ್ಬ ಕಾರ್ಮಿಕ ಸಾವು, 24 ತಾಸಿನಲ್ಲಿ ಇದು 2ನೇ ಪ್ರಕರಣ

ಮಡಿಕೇರಿ: 24 ಗಂಟೆಗಳ ಅವಧಿಯಲ್ಲಿ ಹುಲಿ ದಾಳಿ(Tiger Attack)ಗೆ ಸಿಲುಕಿ ಮತ್ತೊಬ್ಬರು ಮೃತಪಟ್ಟಿದ್ದಾರೆ. ಹುಲಿ ದಾಳಿಗೆ ಸೋಮವಾರ ಬೆಳಿಗ್ಗೆ ಕೊಡಗು ಹಾಗೂ ಕೇರಳ ಗಡಿಭಾಗದ ಪಲ್ಲೇರಿ ಗ್ರಾಮದಲ್ಲಿ ಮತ್ತೊಬ್ಬರು ಮೃತಪಟ್ಟಿದ್ದಾರೆ.
ಮೃತಪಟ್ಟವರನ್ನು ಕೃಷಿ ಕಾರ್ಮಿಕ ರಾಜು (75) ಎಂದು ಗುರುತಿಸಲಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಹುಲಿ ದಾಳಿಗೆ ಸಿಲುಕಿ ಮೃತಪಟ್ಟವರ ಸಂಖ್ಯೆ 2ಕ್ಕೆ ಏರಿದೆ. ಸೋಮವಾರ ಬೆಳಗ್ಗೆ ತನ್ನ ಮನೆಯಿಂದ ಹೊರ ಬಂದ ರಾಜು ಅವರ ಮೇಲೆ ಕಾಫಿ ತೋಟದಲ್ಲಿ ಅಡಗಿದ್ದ ಹುಲಿ ದಿಢೀರ್‌ ದಾಳಿ ನಡೆಸಿದೆ. ತಲೆ ಹಾಗೂ ಕುತ್ತಿಗೆ ಭಾಗಕ್ಕೆ ಕಚ್ಚಿ ತೀವ್ರವಾಗಿ ಗಾಯಗೊಳಿಸಿದ್ದರಿಂದ ರಾಜು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತ ರಾಜು ಪೂಣಚ್ಚ ಎಂಬುವರ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರುಮೈಸೂರು ಜಿಲ್ಲೆಯ ನಿವಾಸಿ ಎನ್ನಲಾಗಿದೆ.
ಸ್ಥಳಕ್ಕೆ ನಾಗರಹೊಳೆ ಎಸಿಎಫ್ ಗೋಪಾಲ್ ಮತ್ತು ಹುಲಿ ಕಾರ್ಯಾಚರಣೆ ಪಡೆಯ ಸಿಬ್ಬಂದಿ ತೆರಳಿದ್ದಾರೆ. ರಾಜು ಅವರನ್ನು ಕೊಂದ ಹುಲಿ ಕಾಫಿ ತೋಟದಲ್ಲಿ ಅಡಗಿ ಕೊಂಡಿರುವುದು ಗೋಚರಿಸಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹುಲಿಯನ್ನು ಸೆರೆ ಹಿಡಿಯಲು ಸಿದ್ಧತೆ ನಡೆಸಿದ್ದಾರೆ.
ಭಾನುವಾರ ಸಂಜೆ ಹುಲಿ ದಾಳಿಗೆ ಕಾರ್ಮಿಕ ಹದಿಹರೆಯದ ಯುವಕ ಚೇತನ್ (18) ಎಂಬವರು ಮೃತಪಟ್ಟ ಅನತಿ ದೂರದಲ್ಲಿಯೇ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಹುಲಿ ಕಾಫಿ ತೋಟದಲ್ಲಿಯೇ ಸುಳಿದಾಡುತ್ತಿರುವುದರಿಂದ ಕಾರ್ಮಿಕರ ಆತಂಕ ಹೆಚ್ಚಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿಗೆ ಪೂರ್ಣ ಬಹುಮತ ; ಪೀಪಲ್ಸ್ ಪಲ್ಸ್ ಸಮೀಕ್ಷೆಯಲ್ಲಿ ಬಹಿರಂಗ....

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement