ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ-ಉಕ್ಕಿನ ಕಾರ್ಖಾನೆ ಮುಚ್ತೇವೆ: ಕೇಂದ್ರ ಸರ್ಕಾರದ ಉತ್ತರ

posted in: ರಾಜ್ಯ | 0

ನವದೆಹಲಿ: ಚುನಾವಣೆ ಸನಿಹದಲ್ಲಿ ರಾಜಕೀಯ ಪಕ್ಷಗಳಿಗೆ ಅಸ್ತ್ರವಾಗಿ ಪರಿಣಮಿಸಿದ್ದ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (VISL) ಮುಚ್ಚುವುದಾಗಿ ಕೇಂದ್ರ ಸರ್ಕಾರ ರಾಜ್ಯಸಭೆಗೆ ತಿಳಿಸಿದೆ.
ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಶಾಶ್ವತವಾಗಿ ಮುಚ್ಚಲಿದ್ದೇವೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದೆ. ಈ ಬಗ್ಗೆ ಕರ್ನಾಟಕ ಮೂಲದವರೇ ಆದ ರಾಜ್ಯಸಭಾ ಸದಸ್ಯ ಜೈರಾಂ ರಮೇಶ ಟ್ವೀಟ್‌ ಮಾಡಿದ್ದು, ತೀವ್ರ ಅಸಮಾಧಾನ ಹೊರಹಾಕಿದ್ದಾರೆ.ಇಂದು, ಸೋಮವಾರ ರಾಜ್ಯಸಭೆಯಲ್ಲಿ ಸರ್ಕಾರ, ಭದ್ರಾವತಿಯ ವಿಐಎಸ್‍ಎಲ್ ಅನ್ನು ಶಾಶ್ವತವಾಗಿ ಮುಚ್ಚಲಿದೆ ಎಂದು ಹೇಳಿದ್ದು, ಅದಕ್ಕೆ ಕಾರಣ ಸಹ ನೀಡಿದೆ ಎಂದು ಹೇಳಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಕಾರ್ಖಾನೆಗೆ ಕಬ್ಬಿಣದ ಅದಿರಿನ ಮೂಲ ಇಲ್ಲ ಎಂಬ ಕಾರಣ ನೀಡಿದೆ. ರಾಜ್ಯದಲ್ಲಿ ಖಾಸಗಿ ಕಾರ್ಖಾನೆಗಳು ಗಣಿಗಳನ್ನು ಹೊಂದಿದ್ದರೂ, ಎಸ್‍ಎಐಎಲ್‍ಗೆ ಮಾತ್ರ ಗಣಿಗಳಿಲ್ಲ ಎಂಬುದು ಆಶ್ಚರ್ಯದ ಸಂಗತಿಯಾಗಿದೆ. ಭದ್ರಾವತಿಯು ಕಬ್ಬಿಣ ಅದಿರು ಸಂಪತ್ಭರಿತ ಬಳ್ಳಾರಿಯಿಂದ ಕೇವಲ 250 ಕಿಮೀ ನಷ್ಟು ಅಂತರದಲ್ಲಿದ್ದರೂ ಈ ಕಾರಣ ನೀಡಲಾಗಿದೆ. ವಿಐಎಸ್‍ಎಲ್‍ಗೆ ಗಣಿ ಪರವಾನಗಿಯನ್ನು 2011ರಲ್ಲಿ ನೀಡಿದರೂ ಮೋದಿ ಸರ್ಕಾರ ಈವರೆಗೂ ಏನನ್ನೂ ಮಾಡಿಲ್ಲ ಎಂದು ಜೈರಾಂ ರಮೇಶ ಆರೋಪಿಸಿದ್ದಾರೆ.

ಶಿವಮೊಗ್ಗದ ಐಬಿಯಲ್ಲಿ ಇತ್ತೀಚೆಗೆ ವಿಐಎಸ್ಎಲ್ ಕಾರ್ಮಿಕ ಮುಖಂಡರ ಜೊತೆ ಸಭೆ ನಡೆಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಿದ್ದರು. ಹಾಗೂ ಈ ವೇಳೆ ಕಾರ್ಖಾನೆ ಮುಚ್ಚಲು ಬಿಡದೆ ಅದನ್ನು ಪುನಶ್ಚೇತನಗೊಳಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಭರವಸೆ ನೀಡಿದ್ದರು.

ಇಂದಿನ ಪ್ರಮುಖ ಸುದ್ದಿ :-   ವರುಣಾದಿಂದ ವಿಜಯೇಂದ್ರ ಸ್ಪರ್ಧೆ : ಊಹಾಪೋಹಕ್ಕೆ ತೆರೆ ಎಳೆದ ಯಡಿಯೂರಪ್ಪ

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement