ಹೊನ್ನಾವರ: ನಾಯಿ ಜೊತೆ ಆಟವಾಡುತ್ತಿದ್ದ ಆರು ವರ್ಷದ ಬಾಲಕ ತೋಟದ ಬಾವಿಗೆ ಬಿದ್ದು ಸಾವು

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ವಂದೂರು ಸಮೀಪದ ತೋಟದ ಬಾವಿಯಲ್ಲಿ ಮಗುವೊಂದು ಆಯತಪ್ಪಿ ಬಿದ್ದು ಮೃತಪಟ್ಟ ಧಾರುಣ ಘಟನೆ ಭಾನುವಾರ ನಡೆದ ವರದಿಯಾಗಿದೆ.
ಮೃತ ಬಾಲಕನನ್ನು ಹೊನ್ನಾವರ ತಾಲೂಕಿನ ವಂದೂರಿನ ನಾಗಭೂಷಣ ಹೆಗಡೆ (6) ಎಂದು ಗುರುತಿಸಲಾಗಿದೆ. ಈತ ಒಂದನೇ ತರಗತಿ ವಿದ್ಯಾರ್ಥಿಯಾಗಿದ್ದ. ತಮ್ಮ ಮನೆಯ ತೋಟದ ಸಮೀಪ ನಾಯಿಯೊಂದಿಗೆ ಆಟ ಆಡುತ್ತಿದ್ದಾಗ ಆಕಸ್ಮಿಕವಾಗಿ ತೆರೆದ ಬಾವಿಯಲ್ಲಿ ಬಿದ್ದಿದ್ದಾನೆ. ಸಮಯವಾದರೂ ಮನೆಗೆ ಬಾರದಿದ್ದಾಗ ಮಗುವನ್ನು ಕುಟುಂಬದವರು ತೋಟದಲ್ಲಿ ಹುಡುಕಿದ್ದಾರೆ. ಆದರೆ ಅಲ್ಲೆಲ್ಲೂ ಕಾಣದಿದ್ದಾಗ ಬಾವಿ ನೋಡಿದಾಗ ಅದರಲ್ಲಿ ಬಿದ್ದಿರುವುದು ಕಂಡುಬಂದಿದೆ.
ಬಾವಿಯಲ್ಲಿ ನೀರಿದ್ದ ಪರಿಣಾಮ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸ್ಥಳಕ್ಕಾಗಮಿಸಿದ ಹೊನ್ನಾವರ ಪಿಎಸ್‌ ಪ್ರವೀಣಕುಮಾರ ನೇತ್ರತ್ವದಲ್ಲಿ ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿ ಶವ ಮೇಲಕ್ಕೆ ಎತ್ತಿದ್ದಾರೆ. ಹೊನ್ನಾವರ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement