ಕರ್ನಾಟಕ ಬಜೆಟ್‌ 2023-24: ಕೃಷಿ ಪೂರಕ ಚಟುವಟಿಕೆ, ನೀರಾವರಿಗೆ ಆದ್ಯತೆ

ಬೆಂಗಳೂರು: ಕರ್ನಾಟಕ ಬಜೆಟ್‌ 2023-24ರಲ್ಲಿ ಮುಖ್ಯಮಂತ್ರಿ ಬಸವರಾಜ ಕೃಷಿಕರಿಗೆ ಬಂಪರ್ ಕೊಡುಗೆ ಪ್ರಕಟಿಸಿದ್ದಾರೆ.
ಈ ವರ್ಷದಿಂದ ರೈತರಿಗೆ ನೀಡುತ್ತಿರುವ ಬಡ್ಡಿ ರಹಿತ ಅಲ್ಪಾವಧಿ ಸಾಲದ ಮಿತಿಯನ್ನು 3 ಲಕ್ಷ ರೂ. ಗಳಿಂದ 5 ಲಕ್ಷ ರೂ. ಗಳಿಗೆ ಹೆಚ್ಚಿಸಲಾಗಿದೆ. ಅಲ್ಲದೆ, 30 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25,000 ಕೋಟಿ ರೂ. ಗಳಷ್ಟು ಸಾಲ ವಿತರಿಸುವ ಗುರಿ ನಿಗದಿ ಪಡಿಸಲಾಗಿದೆ. ಅಲ್ಲದೆ, ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ 2023-24ನೇ ಸಾಲಿನಲ್ಲಿ ಒಟ್ಟಾರೆಯಾಗಿ 39,031 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಅಲ್ಲದೆ, ಪ್ರಸಕ್ತ ವರ್ಷದಲ್ಲಿ ನೀರಾವರಿ ಕ್ಷೇತ್ರಕ್ಕೆ ಒಟ್ಟಾರೆ 25,000 ಕೋಟಿ ರೂ. ಗಳನ್ನು ಒದಗಿಸಲಾಗಿದೆ ಎಂದು ಒದಗಿಸಲಾಗಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಕಿಸಾನ್ ಕ್ರೆಡಿಟ್ ಕಾರ್ಡ್ ಇರುವ ರೈತರಿಗೆ ಭೂಸಿರಿ ಎಂಬ ನೂತನ ಯೋಜನೆಯಡಿ 2023-24ನೇ ಸಾಲಿನಿಂದ 10 ಸಾವಿರ ರೂ. ಗಳ ಹೆಚ್ಚುವರಿ ಸಹಾಯ ಧನ ನೀಡಲು ನಿರ್ಧರಿಸಲಾಗಿದೆ. ಇದರಿಂದ ರಾಜ್ಯದ ಸುಮಾರು 50 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಸಣ್ಣ ಮತ್ತು ಅತಿ ಸಣ್ಣ ರೈತರ ಕುಟುಂಬಗಳಿಗೆ 180 ಕೋಟಿ ರೂ. ವೆಚ್ಚದಲ್ಲಿ ಜೀವನ್‌ಜ್ಯೋತಿ ವಿಮಾ ಯೋಜನೆಯಡಿ ಭದ್ರತೆ ನೀಡಲಾಗಿದೆ.
ಕಳೆದ ವರ್ಷ ಘೋಷಿಸಿದ ಡೀಸೆಲ್ ಸಬ್ಸಿಡಿ ನೀಡುವ ರೈತ ಶಕ್ತಿ ಯೋಜನೆಗೆ 400 ಕೋಟಿ ರೂ. ಅನುದಾನ
ಕೃಷಿ ಯಾಂತ್ರೀಕರಣವನ್ನು ಉತ್ತೇಜಿಸಲು 2,037 ಕೋಟಿ ರೂ.
ಕೃಷಿ ಮತ್ತು ತೋಟಗಾರಿಕೆಯಲ್ಲಿ ಹನಿ ನೀರಾವರಿಗಾಗಿ 2,900 ಕೋಟಿ ರೂ.ಮಾರುಕಟ್ಟೆ ನೆರವು
ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಮುಂತಾದ ಪರಿಕರಗಳಿಗೆ 962 ಕೋಟಿ ರೂ. ವೆಚ್ಚ
ನೀರಾವರಿ ಪಂಪ್‌ಸೆಟ್‌ಗಳಿಗೆ 52,590 ಕೋಟಿ ರೂ. ವಿದ್ಯುತ್‌ ಸಹಾಯ ಧನ ನೀಡಲಾಗಿದೆ.
ಫಸಲ್ ಬಿಮಾ ಯೋಜನೆಯಡಿ 86 ಲಕ್ಷ ರೈತರ ಬೆಳೆ ವಿಮೆಗಾಗಿ 4,900 ಕೋಟಿ ರೂ. ಪ್ರೀಮಿಯಂ ಪಾವತಿಸಲಾಗಿದೆ.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ, ರಾಗಿ, ಜೋಳ, ಹೆಸರು ಕಾಳು ಮತ್ತು ತೊಗರಿ ಮುಂತಾದ ಆಹಾರ ಧಾನ್ಯಗಳ ಖರೀದಿಗಾಗಿ 6,650 ಕೋಟಿ ರೂ. ಒದಗಿಸಲಾಗಿದೆ.
ಬೆಳೆಗಳ ಸಂಸ್ಕರಣೆ, ಶೇಖರಣೆಗಾಗಿ 10.45 ಲಕ್ಷ ಫಲಾನುಭವಿಗಳಿಗೆ 175 ಕೋಟಿ ರೂ. ಗಳ ನೆರವು ನೀಡಲಾಗಿದೆ.
ತೋಟಗಾರಿಕೆ ಹಾಗೂ ರೇಷ್ಮೆ ಕೃಷಿಗೆ ಪ್ರೋತ್ಸಾಹ ನೀಡುವ ಉದ್ದೇಶಕ್ಕಾಗಿ 5,245 ಕೋಟಿ ರೂ. ವೆಚ್ಚ ಮಾಡಲಾಗಿದೆ.
ರೈತ ವಿದ್ಯಾನಿಧಿ ಯೋಜನೆಯಡಿಯಲ್ಲಿ 10.32 ಲಕ್ಷ ವಿದ್ಯಾರ್ಥಿಗಳಿಗೆ ಒಟ್ಟು 125 ಕೋಟಿ ರೂ. ಗಳನ್ನು ನೀಡಲಾಗಿದೆ.
ರಾಜ್ಯದಲ್ಲಿ ‘ಯಶಸ್ವಿನಿ ಯೋಜನೆ’ ಮರು ಜಾರಿ. 32 ಲಕ್ಷ ರೈತರ ನೋಂದಣಿ
ರಾಜ್ಯಾದ್ಯಂತ ವಿವಿಧ ನೀರಾವರಿ ಯೋಜನೆಗಳ ಜಾರಿಗೆ ಒಟ್ಟು 25 ಸಾವಿರ ಕೋಟಿ ರೂ. ಅನುದಾನ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement