ಐದು ವರ್ಷಗಳಿಗೊಮ್ಮೆ ನಡೆಯುವ ಬಮ್ಮಿಗಟ್ಟಿ ಗ್ರಾಮದೇವಿಯರ ಜಾತ್ರೆಗೆ ಚಾಲನೆ

posted in: ರಾಜ್ಯ | 0

ಕಲಘಟಗಿ : ಐದು ವರ್ಷಗಳಿಗೊಮ್ಮೆ ನಡೆಯುವ ತಾಲೂಕಿನ ಬಮ್ಮಿಗಟ್ಟಿ ಗ್ರಾಮದ ಶ್ರೀ ಗ್ರಾಮದೇವಿ ಜಾತ್ರಾ ಮಹೋತ್ಸವಕ್ಕೆ ಬುಧವಾರ ವಿಧ್ಯುಕ್ತ ಚಾಲನೆ ನೀಡಲಾಯಿತು.
ಕಲಘಟಗಿಯ ಹನ್ನೆರಡು ಮಠದ ರೇವಣಸಿದ್ಧೇಶ್ವರ ಶಿವಾಚಾರ್ಯರ ಸಮ್ಮುಖದಲ್ಲಿ ಆಲದಕಟ್ಟಿ ಗ್ರಾಮಸ್ಥರಿಂದ ಗ್ರಾಮದೇವಿಯರಿಗೆ ತವರು‌ ಮನೆಯ ಉಡಿ ತುಂಬುವ ಮೂಲಕ ಜಾತ್ರಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ನಂತರ ಬಮ್ಮಿಗಟ್ಟಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಉಡಿ ತುಂಬಿ ದೇವಿಯ ಕೃಪೆಗೆ ಪಾತ್ರರಾದರು.
ಇದಕ್ಕೂ ಮುನ್ನ ಬೆಳಿಗ್ಗೆ ಗ್ರಾಮದೇವಿಯರಿಗೆ ಗ್ರಾಮದ ಹಿರೇಮಠ, ಚಿಕ್ಕಮಠ, ವಿರಕ್ತಮಠ, ಅಂಕಲಿಮಠ, ಸೂರಗಿಮಠದ ಪೂಜ್ಯರು ವಿಶೇಷ ಪೂಜೆ ಸಲ್ಲಿಸಿದರು. ಚೌತಮನೆಯಲ್ಲಿ ಪ್ರತಿಷ್ಠಾಪಿಸಿರುವ ಉಭಯದೇವಿಯರನ್ನು
ಪೂಜಿಸಿ ಕೃತಾರ್ಥರಾದರು. ಗ್ರಾಮದ ವತಿಯಿಂದ ಆಲದಕಟ್ಟಿ ಗ್ರಾಮಸ್ಥರನ್ನು ಸನ್ಮಾನಿಸಲಾಯಿತು. ಸಂಜೆ ಗದುಗಿನ ಕದಮನಹಳ್ಳಿ ಪಂಚಾಕ್ಷರಿ ಶಾಸ್ತ್ರಿಗಳಿಂದ ಪುರಾಣ ಪ್ರವಚನ ನಡೆಯಿತು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

3 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಇಂದಿನ ಪ್ರಮುಖ ಸುದ್ದಿ :-   ಇಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement