ಮಹಿಳಾ ಕೃಷಿ ಕಾರ್ಮಿಕರ ಸಹಾಯಧನ ಹೆಚ್ಚಳ : ಸಿಎಂ ಬೊಮ್ಮಾಯಿ ಘೋಷಣೆ

posted in: ರಾಜ್ಯ | 0

ಬೆಂಗಳೂರು : ದುಡಿಯುವ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಬಜೆಟ್ ನಲ್ಲಿ 500 ರೂ. ಸಹಾಯಧನ ಘೋಷಣೆ ಮಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗ ಸಹಾಯಧನವನ್ನು 1000 ರೂ.ಗಳಿಗೆ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ.
ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ಭೂರಹಿತ ದುಡಿಯುವ ಮಹಿಳಾ ಕೃಷಿಕಾರ್ಮಿಕರಿಗೆ 1000 ರೂ.ಗಳನ್ನು ನೀಡುತ್ತೇವೆ ಎಂದು ತಿಳಿಸಿದ್ದಾರೆ.
ಬಜೆಟ್ ಅಂದರೆ ರಾಜ್ಯದ ಜನರ ಆಶೋತ್ತರ ಈಡೇರಿಸುವ ಗುರಿಯಾಗಿರುತ್ತದೆ. ಬಜೆಟ್‌ನಿಂದ ಜನಕಲ್ಯಾಣವೂ ಆಗಬೇಕು. ಆಗ ಅದಕ್ಕೆ ಅರ್ಥ ಬರುತ್ತದೆ. ವಾಸ್ತವಕ್ಕೆ ಹತ್ತಿರವಾದ ಬಜೆಟ್ ಮಂಡನೆ ಮಾಡಿದ್ದೇನೆ. ಸರ್ವವ್ಯಾಪಿ, ಸರ್ವಸ್ಪರ್ಶಿ ಬಜೆಟ್ ನೀಡುವ ಪ್ರಯತ್ನ ನನ್ನದಾಗಿತ್ತು. ನಾವು ಸಂಪೂರ್ಣ ಭ್ರಷ್ಟಾಚಾರ ತೆಗೆದಿದ್ದೇವೆ ಎಂದು ಹೇಳಲಾರೆ. ಆದರೆ ಭ್ರಷ್ಟಾಚಾರ ನಿಯಂತ್ರಣಕ್ಕೆ ಕ್ರಮ ತೆಗೆದುಕೊಂಡಿದ್ದೇವೆ. ಮದ್ಯವರ್ತಿಗಳ ಕೈಬಿಸಿ ಮಾಡುವುದನ್ನು ತಪ್ಪಿಸಿದ್ದೇನೆ. ಇದಕ್ಕಾಗಿ ಇನ್ನಷ್ಟು ಗ್ರಾಮ ಒನ್ ಕೇಂದ್ರ ಮಾಡುತ್ತೇವೆ ಎಂದು ಹೇಳಿದರು.
ಕೋವಿಡ್‌ ನಂತರದ ಕಾಲಘಟ್ಟದಲ್ಲಿ ಆರ್ಥಿಕ ಚಟುವಟಿಕೆ ಚೇತರಿಕೆ ಕಂಡಿದೆ. ರಾಜ್ಯದ ಆರ್ಥಿಕತೆ ಶ. 14ರಷ್ಟು ಹೆಚ್ಚಳವಾಗಿದೆ. 2023-24ರಲ್ಲಿ ಆರ್ಥಿಕ ನಿರ್ವಹಣೆ, ಬಜೆಟ್ ನಲ್ಲಿ ಶಿಸ್ತು ಕಾಪಾಡಲಾಗಿದೆ. ಅಭಿವೃದ್ದಿಗೆ ಯಾವುದೇ ತೊಂದರೆಯಾಗಲ್ಲ ಎಂದು ಬೊಮ್ಮಾಯಿ ತಿಳಿಸಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ರಾಜ್ಯದಲ್ಲಿ 9 ನೂತನ ವಿಶ್ವ ವಿದ್ಯಾಲಗಳನ್ನು ಉದ್ಘಾಟಿಸಿ ಸಿಎಂ ಬೊಮ್ಮಾಯಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement