ಗುಡಿಸಲಿಗೆ ಆಕಸ್ಮಿಕ ಬೆಂಕಿ: ವೃದ್ಧ ದಂಪತಿ ಸಜೀವ ದಹನ

ವಿಜಯಪುರ: ಗುಡಿಸಲಿನಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡದಿಂದ ಇಬ್ಬರು ಸಜೀವ ದಹನವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಹೊರವಲಯದಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.
ಚಡಚಣ ಪಟ್ಟಣದ ಹೊರ ವಲಯದ ಜಮೀನಿನ ಗುಡಿಸಲಿನಲ್ಲಿ ವಾಸವಿದ್ದ ಕರೀಮಸಾಬ ಇಮಾಮಸಾಬ ಟಪಾಲ (82), ಸಾಜನಬಿ ಕರೀಮಸಾಬ ಟಪಾಲ ಮೃತಪಟ್ಟಿರುವ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ನೀವರಗಿ ರಸ್ತೆಯಲ್ಲಿನ ತಮ್ಮ ಜಮೀನಿನಲ್ಲಿ ಈ ವೃದ್ಧ ದಂಪತಿ ಗುಡಿಸಲು ಹಾಕಿಕೊಂಡು ವಾಸವಿದ್ದರು. ರಾತ್ರಿ ಮಲಗಿದ್ದ ವೇಳೆ ಚಿಮಣಿಯಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಊಹಿಸಲಾಗಿದೆ. ಗುಡಿಸಲು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಇಬ್ಬರು ಗುಡುಸಲಿನಲ್ಲಿಯೇ ಮೃತಪಟ್ಟಿದ್ದಾರೆ. ಭಾನುವಾರ ಬೆಳಿಗ್ಗೆ ವಿಷಯ ಗೊತ್ತಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಚಡಚಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

4 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ದಾಂಡೇಲಿ : ಗಂಡ ಹೆಂಡತಿಯ ಜಗಳ ; ಕೋಪದಲ್ಲಿ ಮಗುವನ್ನೇ ಮೊಸಳೆಗಳಿರುವ ನಾಲೆಗೆ ಎಸೆದ ತಾಯಿ

ನಿಮ್ಮ ಕಾಮೆಂಟ್ ಬರೆಯಿರಿ

advertisement