ಭಟ್ಕಳ: ಹಾಡುವಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ, ಇಬ್ಬರು ವಶಕ್ಕೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಾಲೂಕಿನ ಹಾಡುವಳ್ಳಿಯಲ್ಲಿ ಎಂಬಲ್ಲಿ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಕೊಲೆಯಾದ ಶಂಭು ಭಟ್ಟ ಅವರ ಹಿರಿಯ ಸೊಸೆ ವಿದ್ಯಾ ಶ್ರೀಧರ ಭಟ್ಟ ಹಾಗೂ ಆಕೆಯ ತಂದೆ ಶ್ರೀಧರ ಜನಾರ್ಧನ ಭಟ್ಟ ಎಂಬವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ.
ಶುಕ್ರವಾರ ಶಂಭು ಹೆಗಡೆ (65), ಪತ್ನಿ ಮಾದೇವಿ ಹೆಗಡೆ ( 58), ಮಗ ರಾಘವೇಂದ್ರ ಹೆಗಡೆ (40) ಹಾಗೂ ಪತ್ನಿ ಕುಸುಮಾ ಭಟ್ (32)  ಅವರನ್ನು ಬರ್ಬರವಾಗಿ ಕೊಲೆಗೈಯಲಾಗಿತ್ತು. ಕೊಲೆಯ ಪ್ರಮುಖ ಆರೋಪಿ ಎಂದು ಅನುಮಾನಿಸಲಾಗಿರುವ ವಿನಯ ಶ್ರೀಧರ ಭಟ್ಟ ಎಂಬಾತ ನಾಪತ್ತೆಯಾಗಿದ್ದು, ಪತ್ತೆ ಕಾರ್ಯಕ್ಕೆ ಮೂರು ತಂಡವನ್ನು ರಚಿಸಿ ಶೋಧ ಕಾರ್ಯ ನಡೆಸಲಾಗುತ್ತಿದೆ.
ಶಂಭು ಭಟ್ಟರ ಹಿರಿಯ ಪುತ್ರ ಶ್ರೀಧರ ಭಟ್ಟ ಕಿಡ್ನಿ ತೊಂದರೆಯಿಂದ ಬಳಲುತ್ತಿದ್ದರು. ಹಾಗೂ ಕೆಲ ತಿಂಗಳ ಹಿಂದೆ ಇದೇ ಕಾರಣಕ್ಕೆ ಮೃತಪಟ್ಟಿದ್ದರು. ಅವರ ಮರಣದ 14ನೇ ದಿನದಿಂದ ಆರಂಭವಾಗಿದ್ದ ಆಸ್ತಿ ಜಗಳ ನಾಲ್ವರ ಕೊಲೆಯಲ್ಲಿ ಪರ್ಯಾವಸನಗೊಂಡಿದೆ ಎಂದು ಹೇಳಲಾಗುತ್ತಿದೆ. ಶ್ರೀಧರ  ಮೃತಪಟ್ಟ ನಂತರ ಸೊಸೆಯ ಸಹೋದರ ವಿನಯ ಆಗಾಗ ಹಾಡುವಳ್ಳಿಗೆ ಹೋಗಿ ಪಾಲು ಕೊಡುವಂತೆ ಜಗಳ ಮಾಡುತ್ತಿದ್ದುದರಿಂದ ಶಂಭು ಭಟ್ಟರು ಇಬ್ಬರು ಗಂಡು ಮಕ್ಕಳು, ಮೂವರು ಹೆಣ್ಣು ಮಕ್ಕಳು ಹಾಗೂ ತಾವು ಹಾಗೂ ತಮ್ಮ ಪತ್ನಿ ಹೀಗೆ ಆಸ್ತಿ ಪಾಲು ಮಾಡಿ ಕೊಟ್ಟಿದ್ದರು.

ಪ್ರಮುಖ ಸುದ್ದಿ :-   ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ' ಹೇಳಿಕೆ : ಬಿಜೆಪಿ ಶಾಸಕ ಯತ್ನಾಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ಶುಕ್ರವಾರ ಬೆಳಿಗ್ಗೆ ಕೊಟ್ಟಿಗೆ ಹಾಗೂ ಕೆರೆ ವಿಚಾರವಾಗಿ ಜಗಳ ನಡೆದಿದ್ದು, ಅದು ಮಧ್ಯಾಹ್ನ ಈ ಬರ್ಬರ ಕೃತ್ಯದ ವರೆಗೆ ಎಂದು ಹೇಳಲಾಗುತ್ತಿದೆ. ಹಿರಿಯ ಸೊಸೆ ವಿದ್ಯಾ ಹಾಗೂ ಆಕೆಯ ತಂದೆ ಶ್ರೀಧರ ಅವರನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸಲಾಗುತ್ತಿದ್ದು, ಅವರ ಕುಮ್ಮಕ್ಕಿನಿಂದ ವಿನಯ ಕೊಲೆ ಮಾಡಿದ್ದಾನೆಯೇ ಎಂಬ ದೃಷ್ಟಿಕೋನದಿಂದಲೂ ತನಿಖೆ ನಡೆದಿದೆ ಎನ್ನಲಾಗಿದೆ.
ನಾಲ್ವರನ್ನು ಯಾವುದೇ ಪ್ರತಿರೋಧ ಇಲ್ಲದೆ ಕೊಲೆ ಮಾಡಿದ್ದನ್ನು ಅವಲೋಕಿಸಿದರೆ ನಾಲ್ವರನ್ನು ಕೊಚ್ಚಿದ ರೀತಿ ಒಂದೇ ತೆರನಾಗಿ ಕಂಡುಬಂದಿದೆ. ತಲೆಯ ಹಿಂಭಾಗ, ಮುಖ, ತಲೆ ಕಡಿಯಲಾಗಿದೆ. ಬೇರೆ ದೇಹದ ಭಾಗಕ್ಕೆ ಗಾಯಗಳಾಗಿಲ್ಲ. ಇದು ಇದರಲ್ಲಿ ಹೆಚ್ಚಿನವರು ಪಾಲ್ಗೊಂಡಿದ್ದಾರೆಯೇ ಅಥವಾ ಪೂರ್ವ ತಯಾರಿಯಲ್ಲಿ ಬರಲಾಗಿತ್ತೇ ಎಂಬುದರ ಬಗ್ಗೆ ಸಂಶಯ ಬರುವಂತೆ ಮಾಡುತ್ತದೆ. ತನಿಖೆ ನಂತರ ಎಲ್ಲವೂ ಸ್ಪಷ್ಟವಾಗಲಿದೆ.

4.5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement