ಬಾಲಿವುಡ್‌ ನಟರಾದ ಅಮಿತಾಬ್ ಬಚ್ಚನ್, ಧರ್ಮೇಂದ್ರರ ಮುಂಬೈ ಬಂಗಲೆಗಳಿಗೆ ಬಾಂಬ್ ಬೆದರಿಕೆ

ಮುಂಬೈ : ಅಪರಿಚಿತ ವ್ಯಕ್ತಿಯೊಬ್ಬ ನಾಗ್ಪುರ ಪೊಲೀಸ್ ನಿಯಂತ್ರಣ ಕೊಠಡಿ ಕರೆ ಮಾಡಿ ಬಾಲಿವುಡ್‌ ಸೂಪರ್‌ ಸ್ಟಾರ್‌ ಅಮಿತಾಬ್ ಬಚ್ಚನ್ ಮತ್ತು ಧರ್ಮೇಂದ್ರ ಅವರ ಮನೆಯಲ್ಲಿ ಬಾಂಬ್‌ ಇಟ್ಟಿರುವುದಾಗಿ ಹೇಳಿದ ನಂತ ನಟರ ಮನೆಯಲ್ಲಿ ಪೊಲೀಸರು ಶೋಧ ನಡೆಸಿದರು.
ನಾಗ್ಪುರ ಪೊಲೀಸ್ ನಿಯಂತ್ರಣಕ್ಕೆ ಅನಾಮಧೇಯ ಕರೆ ಬಂದಿದ್ದು, ಬಾಲಿವುಡ್‌ ಸೂಪರ್‌ ಸ್ಟಾರ್‌ ಅಮಿತಾಬ್ ಬಚ್ಚನ್, ಧರ್ಮೇಂದ್ರ ಹಾಗೂ ಉದ್ಯಮಿ ಮುಖೇಶ್ ಅಂಬಾನಿಯ ಆಂಟಿಲಿಯಾದಲ್ಲಿ ಸ್ಫೋಟ ಉಂಟಾಗುತ್ತದೆ ಎಂದು ಹೇಳಿದ್ದಾನೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮ ವರದಿಗಳು ವರದಿ ಮಾಡಿವೆ. ನಂತರ ಮುಂಬೈ ಪೊಲೀಸರು ಬಾಲಿವುಡ್ ತಾರೆಗಳಾದ ಅಮಿತಾಬ್ ಬಚ್ಚನ್ ಮತ್ತು ಧರ್ಮೇಂದ್ರ ಮತ್ತು ಉದ್ಯಮಿ ಮುಖೇಶ್ ಅಂಬಾನಿಯವರ ಮನೆಗಳಲ್ಲಿ ಧೋಧ ನಡೆಸಿದರು.
ಅನಾಮಧೇಯ ಕರೆಯ ನಂತರ, ನಾಗ್ಪುರ ಪೊಲೀಸ್ ನಿಯಂತ್ರಣ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಹಾಗೂ ಮುಂಬೈ ಪೊಲೀಸರು ಕರೆ ಮಾಡಿದವರನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ.
ಅಮಿತಾಬ್ ಬಚ್ಚನ್ ಮುಂಬೈನಲ್ಲಿ ಐದು ಐಷಾರಾಮಿ ಮನೆಗಳನ್ನು ಹೊಂದಿದ್ದಾರೆ. ಪ್ರಸ್ತುತ, ಇಡೀ ಬಚ್ಚನ್ ಕುಟುಂಬವು ಜಲ್ಸಾದಲ್ಲಿ ವಾಸಿಸುತ್ತಿದೆ. ಧರ್ಮೇಂದ್ರ ಜುಹುನ ಬಂಗಲೆಯಲ್ಲಿ ವಾಸಿಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ʼಗೋವಾದ ಮೇಲೆ ಬಲವಂತವಾಗಿ ಭಾರತದ ಸಂವಿಧಾನದ ಹೇರಿಕೆ ; ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಯಿಂದ ಭುಗಿಲೆದ್ದ ವಿವಾದ : ದೇಶ ಒಡೆಯುವ ಹುನ್ನಾರ ಎಂದ ಪ್ರಧಾನಿ ಮೋದಿ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement