ರಾಮನಗರ: ಗದ್ದೆಗೆ ತೆರಳಿದ್ದ ಬಾಲಕನ ಮೇಲೆ ಚಿರತೆ ದಾಳಿ ; ಆಸ್ಪತ್ರೆಗೆ ದಾಖಲು

ರಾಮನಗರ: ತಂದೆ ಜೊತೆ ಕಬ್ಬಿನ ಗದ್ದೆಗೆ ತೆರಳಿದ್ದ ಬಾಲಕನ ಮೇಲೆ ಚಿರತೆ ದಾಳಿ ಮಾಡಿದ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬೋರೇಗೌಡನದೊಡ್ಡಿ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಗೌತಮ​(14) ಚಿರತೆ ದಾಳಿಗೊಳದಾಗ ಬಾಲಕ ಎಂದು ಗುರುತಿಸಲಾಗಿದೆ. ತಂದೆಯೊಂದಿಗೆ ಕಬ್ಬಿನ ಗದ್ದೆಗೆ ತೆರಳಿದ್ದ ವೇಳೆ ಬಾಲಕ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದೆ. ಬಾಲಕನ ಚೀರಾಟ ಕೇಳಿ ಸ್ಥಳೀಯರು ಬರುತ್ತಿದ್ದಂತೆ ಚಿರತೆ ಹೆದರಿ ಬಾಲಕನನ್ನು ಬಿಟ್ಟು ಪರಾರಿಯಾಗಿದೆ. ದಾಳಿಯಲ್ಲಿ ಬಾಲಕಿ ಗೌತಮನ ಕುತ್ತಿಗೆ ಮತ್ತು ತಲೆಗೆ ಗಾಯಗಳಾಗಿದ್ದು, ಮದ್ದೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿರತೆ ಸೆರೆ ಹಿಡಿದು ಸ್ಥಳಾಂತರಿಸುವಂತೆ ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement