ಈಶಾನ್ಯದ ಫಲಿತಾಂಶದ ನಂತರ ಬಿಜೆಪಿಗೆ 3ಕ್ಕೆ 3…! : ನಾಗಾಲ್ಯಾಂಡ್‌, ತ್ರಿಪುರದಲ್ಲಿ ಬಹುಮತ, ಮೇಘಾಲಯದಲ್ಲಿ ಮತ್ತೆ ಎನ್‌ಪಿಪಿ ಜೊತೆ ಸಖ್ಯ

ನವದೆಹಲಿ: ಮೂರು ಈಶಾನ್ಯ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಪರಿಪೂರ್ಣ ಮೂರು ಅಂಕಗಳನ್ನು ಗಳಿಸಿದೆ. ತ್ರಿಪುರಾ ಮತ್ತು ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಮೈತ್ರಿಕೂಟ ನಿಚ್ಚಳ ಬಹುಮತ ಪಡೆದರೆ ಮೇಘಾಲಯದಲ್ಲಿ ಕಾನ್ರಾಡ್ ಸಂಗ್ಮಾ ಜೊತೆಗಿನ ತನ್ನ ಸಂಬಂಧವನ್ನು ಮರುಸ್ಥಾಪಿಸಿದ ನಂತರ ಮೇಘಾಲಯದಲ್ಲಿ ಸರ್ಕಾರವನ್ನು ರಚಿಸಲು ಪ್ರಯತ್ನಗಳು ನಡೆಯುತ್ತಿವೆ. ತ್ರಿಪುರಾದಲ್ಲಿ ಬಿಜೆಪಿ-ಐಪಿಎಫ್‌ಟಿ (ಇಂಡಿಜಿನಸ್ ಪ್ರೊಗ್ರೆಸ್ಸಿವ್ ಫ್ರಂಟ್ ಆಫ್ ತ್ರಿಪುರ) ಮೈತ್ರಿಕೂಟವು ರಾಜ್ಯದ … Continued

40 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಬಿಜೆಪಿ ಶಾಸಕರ ಪುತ್ರ ಲೋಕಾಯುಕ್ತ ಬಲೆಗೆ

posted in: ರಾಜ್ಯ | 0

ಬೆಂಗಳೂರು: ಟೆಂಡರ್ ಕೊಡಿಸುವ ವಿಚಾರಕ್ಕೆ ಸಂಬಂಧಿಸಿದ ವಿಷಯಕ್ಕೆ ಲಂಚ ಪಡೆಯುತ್ತಿದ್ದ ವೇಳೆ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ (BWSSB) ಮುಖ್ಯ ಅಕೌಂಟೆಂಟ್ ಪ್ರಶಾಂತ ಮಾಡಾಳ ಪ್ರಶಾಂತ ಮಾಡಾಳ ರೆಡ್​ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆ ಬಿದ್ದಿದ್ದಾರೆ. ಇವರು ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರ ಪುತ್ರ ಎಂದು … Continued

ಬೆಂಗಳೂರು: ಅಮ್ಮ ಮಲಗಿದ್ದಾಳೆಂದು ಭಾವಿಸಿ ಅಮ್ಮನ ಶವದ ಜೊತೆಗೆ 2 ದಿನ ಕಳೆದ ಬಾಲಕ…!

posted in: ರಾಜ್ಯ | 0

ಬೆಂಗಳೂರು: ತಾಯಿ ಮಲಗಿದ್ದಲ್ಲೇ ಮೃತಪಟ್ಟಿದ್ದರೂ ಇದನ್ನು ಅರಿಯದ ಬಾಲಕನೊಬ್ಬ ತಾಯಿಯ ಶವದ ಜೊತೆಯಲ್ಲೇ ಎರಡು ದಿನ ಕಾಲ ಕಳೆದ ಮನಕಲಕುವ ಘಟನೆ ಬೆಂಗಳೂರು ನಗರದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಆರ್‌.ಟಿ.ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗಂಗಾ ನಗರದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದ ಅಣ್ಣಮ್ಮ(45) ಮಲಗಿದಲ್ಲಿಯೇ ಮೃತಪಟ್ಟಿದ್ದರು. ಆದರೆ ಅವರ … Continued

ಜಿ 20 ಸಭೆ ಸೈಡ್‌ಲೈನ್‌ನಲ್ಲಿ ಚೀನಾದ ವಿದೇಶಾಂಗ ಸಚಿವರನ್ನು ಭೇಟಿ ಮಾಡಿದ ಜೈಶಂಕರ: ಗಡಿ ವಿವಾದದ ಬಗ್ಗೆ ಚರ್ಚೆ

ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ (ಇಎಎಂ) ಎಸ್. ಜೈಶಂಕರ ಗುರುವಾರ ಜಿ 20 ವಿದೇಶಾಂಗ ಸಚಿವರ ಸಭೆಯ ಪಕ್ಕದಲ್ಲಿ ಚೀನಾದ ವಿದೇಶಾಂಗ ಸಚಿವ ಕ್ವಿನ್ ಗ್ಯಾಂಗ್ ಅವರನ್ನು ಭೇಟಿಯಾದರು. ಉಭಯ ನಾಯಕರ ನಡುವೆ ಇದೇ ಮೊದಲ ದ್ವಿಪಕ್ಷೀಯ ಸಂವಾದವಾಗಿತ್ತು. ಜೈಶಂಕರ ಮತ್ತು ಕಿನ್ ನಡುವಿನ ಚರ್ಚೆಯು ಭಾರತ ಮತ್ತು ಚೀನಾ ನಡುವಿನ ದ್ವಿಪಕ್ಷೀಯ ಬಾಂಧವ್ಯಕ್ಕೆ ಪ್ರಸ್ತುತ … Continued

ದೆಹಲಿ ಸಾರಾಯಿ ನೀತಿ ಹಗರಣ: ಮದ್ಯದ ಉದ್ಯಮಿ ಅಮನದೀಪ್ ಧಲ್‌ ಬಂಧಿಸಿದ ಇ.ಡಿ.

ನವದೆಹಲಿ: ದೆಹಲಿಯ ಸಾರಾಯಿ ನೀತಿ ಹಗರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿದ ಮೂರು ದಿನಗಳ ನಂತರ ಜಾರಿ ನಿರ್ದೇಶನಾಲಯ (ಇ.ಡಿ.) ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಅಮನದೀಪ್ ಧಲ್ ಅವರನ್ನು ಬಂಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ಗಂಟೆಗಳ ಕಾಲ ವಿಚಾರಣೆ ನಡೆಸಿದ ಬುಧವಾರ ಸಂಜೆ ಧಲ್ … Continued

ಮೂರು ರಾಜ್ಯಗಳ ಚುನಾವಣಾ ಫಲಿತಾಂಶ: ತ್ರಿಪುರಾ, ನಾಗಾಲ್ಯಾಂಡ್‌ ನಲ್ಲಿ ಬಿಜೆಪಿ-ಮಿತ್ರಪಕ್ಷಕ್ಕೆ ಬಹುಮತ, ಮೇಘಾಲಯದಲ್ಲಿ ಅತಂತ್ರ

ನವದೆಹಲಿ: ಇಂದು, ಗುರುವಾರ ಈಶಾನ್ಯ ಭಾರತದ ಮೂರು ರಾಜ್ಯಗಳ ಚುನಾವಣೆಯ ಮತ ಎಣಿಕೆ ನಡೆದಿದ್ದು, ತ್ರಿಪುರಾ ಮತ್ತು ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಬಹುಮತದತ್ತ ಮುನ್ನಡೆಯುತ್ತಿದ್ದರೆ ಮೇಘಾಲಯವು ಅತಂತ್ರ ವಿಧಾನಸಭೆ ಕಡೆಗೆ ಹೋಗುತ್ತಿದೆ. ಮೇಘಾಲಯದಲ್ಲಿ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರ ಎನ್‌ಪಿಪಿ ಪಕ್ಷವು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಸರಳ ಬಹುಮತಕ್ಕಿಂತ ಹಿಂದೆ ಬಿದ್ದಿದೆ. … Continued

ಪತ್ನಿ, ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ

posted in: ರಾಜ್ಯ | 0

ಬೆಂಗಳೂರು : ಕ್ಯಾನ್ಸರ್‌ಗೆ ಹೆದರಿದ ಗಂಡ ತನ್ನ ಪತ್ನಿ ಮತ್ತು ಮಕ್ಕಳಿಗೆ ವಿಷವುಣಿಸಿ ಸಾಯಿಸಿದ ನಂತರ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೋಣನಕುಂಟೆಯಲ್ಲಿ ಈ ಘಟನೆ ನಡೆದಿದ್ದು, ನಾಗೇಂದ್ರ ಎಂಬಾತ ಈ ಕೃತ್ಯ ಎಸಗಿದ್ದಾನೆ. ಪತ್ನಿ ವಿಜಯ (28), ಮಕ್ಕಳಾದ ನಿಷಾ (7), ದೀಕ್ಷಾ (5) ಅವರಿಗೆ ವಿಷವುಣಿಸಿದ್ದಾನೆ. ಅವರು … Continued

ಬೆಳಗಾವಿ : ರಾಜಹಂಸಗಡ ಕೋಟೆಯಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ

posted in: ರಾಜ್ಯ | 0

ಬೆಳಗಾವಿ : ಬೆಳಗಾವಿ ತಾಲೂಕು ರಾಜಹಂಸಗಡ ಛತ್ರಪತಿ ಶಿವಾಜಿ ಮಹಾರಾಜರ ಕೋಟೆಯಲ್ಲಿ ಶಿವಾಜಿ ಪ್ರತಿಮೆ ಅನಾವರಣ ಮಾಡಡಬೇಕು ಎಂಬ ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿಯವರ ಕನಸು ಈಡೇರಿದೆ. ಗುರುವಾರ ಶುಭ ಮುಹೂರ್ತದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಛತ್ರಪತಿ ಮಹಾರಾಜರ ಮೂರ್ತಿಯನ್ನು ಅನಾವರಣ ಮಾಡಿದ್ದಾರೆ. ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾರ್ಚ್ 5 … Continued

500 ರೂ. ಕೊಟ್ಟು ಪ್ರಚಾರಕ್ಕೆ ಕರೆತನ್ನಿಎಂದು ಸಿದ್ಧರಾಮಯ್ಯ ಹೇಳಿರುವ ವೀಡಿಯೊ ಟ್ವೀಟ್ ಮಾಡಿದ ಬಿಜೆಪಿ

posted in: ರಾಜ್ಯ | 0

ಬೆಂಗಳೂರು : ರಾಜ್ಯ ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯ ಚುರುಕುಗೊಂಡಿದೆ. ಮತದಾರರನ್ನು ಸೆಳೆಯಲು ಬೇರೆಬೇರೆ ಹೆಸರನ್ನಿಟ್ಟು ವಿವಿಧ ರಾಜಕೀಯ ಪಕ್ಷಗಳು ಪ್ರಚಾರ ನಡೆಸುತ್ತಿವೆ, ಪಕ್ಷಾಂತರಗಳು ಜೋರಾಗಿ ನಡೆಯುತ್ತಿದೆ. ಈ ಮಧ್ಯೆ ಪ್ರತಿಯೊಬ್ಬರಿಗೂ 500 ರೂ. ಕೊಟ್ಟು ಪ್ರಚಾರಕ್ಕೆ ಕರೆದುಕೊಂಡು ಬನ್ನಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆನ್ನಲಾದ ವೀಡಿಯೊವೊಂದು ವೈರಲ್ … Continued

ಅದಾನಿ-ಹಿಂಡೆನ್‌ಬರ್ಗ್ ಪ್ರಕರಣ : ತನಿಖೆಗಾಗಿ ತಜ್ಞರ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್‌, 2 ತಿಂಗಳಲ್ಲಿ ವರದಿ ಸಲ್ಲಿಸಲು ಸೂಚನೆ

ನವದೆಹಲಿ: ಅದಾನಿ ಗ್ರೂಪ್ ಆಫ್ ಕಂಪನಿಗಳ ಬಗ್ಗೆ ಹಿಂಡೆನ್‌ಬರ್ಗ್ ರಿಸರ್ಚ್‌ ವರದಿಯ ಸುತ್ತಲಿನ ವಿವಾದ ಮತ್ತು ಕಾಂಗೋಲೇಟ್ ವಿರುದ್ಧದ ಆರೋಪಗಳನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಎಂ. ಸಪ್ರೆ ನೇತೃತ್ವದ ಸಮಿತಿಯನ್ನು ಗುರುವಾರ ರಚಿಸಿದೆ. ನ್ಯಾಯಮೂರ್ತಿ ಸಪ್ರೆ ಅವರಲ್ಲದೆ ಸಮಿತಿಯು ಒಪಿ ಭಟ್, ನ್ಯಾಯಮೂರ್ತಿ ಜೆ.ಪಿ. ದೇವದತ್, ಕೆ.ವಿ. ಕಾಮತ್, ನಂದನ … Continued