ಪತ್ನಿ, ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ

posted in: ರಾಜ್ಯ | 0

ಬೆಂಗಳೂರು : ಕ್ಯಾನ್ಸರ್‌ಗೆ ಹೆದರಿದ ಗಂಡ ತನ್ನ ಪತ್ನಿ ಮತ್ತು ಮಕ್ಕಳಿಗೆ ವಿಷವುಣಿಸಿ ಸಾಯಿಸಿದ ನಂತರ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಕೋಣನಕುಂಟೆಯಲ್ಲಿ ಈ ಘಟನೆ ನಡೆದಿದ್ದು, ನಾಗೇಂದ್ರ ಎಂಬಾತ ಈ ಕೃತ್ಯ ಎಸಗಿದ್ದಾನೆ. ಪತ್ನಿ ವಿಜಯ (28), ಮಕ್ಕಳಾದ ನಿಷಾ (7), ದೀಕ್ಷಾ (5) ಅವರಿಗೆ ವಿಷವುಣಿಸಿದ್ದಾನೆ. ಅವರು ಸಾವಿಗೀಡಾದ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
2014ರಲ್ಲಿ ದಂಪತಿ ಮದುವೆಯಾಗಿದ್ದರು. ಕೆಲವು ವರ್ಷಗಳಿಂದ ನಾಗೇಂದ್ರ ಕ್ಯಾನ್ಸರ್ ನಿಂದ ಬಳಲುತ್ತಿದ್ದ. ಪತ್ನಿ ವಿಜಯ ಮೆಡಿಕಲ್​ನಲ್ಲಿ ಕೆಲಸ ಮಾಡುತ್ತಿದ್ದರು. ಅವರ ಊಟದಲ್ಲಿ ತಿಗಣೆ ಔಷಧಿ, ಇಲಿ ಔಷಧಿ ಬೆರೆಸಿ ಹೆಂಡತಿ ಮಕ್ಕಳನ್ನ ಕೊಂದಿದ್ದಾನೆ. ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದು ಆತನನ್ನು ರಕ್ಷಣೆ ಮಾಡಲಾಗಿದೆ. ಈ ಕುರಿತು ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ರೋಹಿಣಿ ಸಿಂಧೂರಿ ಮಾನಹಾನಿ ಪ್ರಕರಣ: ಡಿ.ರೂಪಾಗೆ ಜಾಮೀನು ನೀಡಿದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ

1 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement