ಕೃಷ್ಣಾ ನದಿ ಸೇತುವೆ ಮೇಲೆ ಬಾಯಿಗೆ ಹಗ್ಗ ಕಟ್ಟಿದ ಸ್ಥಿತಿಯಲ್ಲಿ ಮೊಸಳೆ ಪ್ರತ್ಯಕ್ಷ..

ವಿಜಯಪುರ: ಜಿಲ್ಲೆಯ ಕೊಲ್ಹಾರ ಪಟ್ಟಣದ ವಿಜಯಪುರ- ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಕೃಷ್ಣಾ ನದಿ ಸೇತುವೆ ಮೇಲೆ ಬಾಯಿಗೆ ಹಗ್ಗ ಕಟ್ಟಿದ ಸ್ಥಿತಿಯಲ್ಲಿ ಮೊಸಳೆಯೊಂದು ಶನಿವಾರ ಕಾಣಿಸಿಕೊಂಡಿದೆ.
ಮೊಸಳೆ ಬಾಯಿಗೆ ಹಗ್ಗದಿಂದ ಕಟ್ಟಿದ್ದರಿಂದ ಆಹಾರ ಸೇವಿಸಲಾಗದ ಮೊಸಳೆ ದಿಕ್ಕು ತೋಚದೆ ಹೆದ್ದಾರಿಗೆ ಬಂದಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಜನವಸತಿ ಪ್ರದೇಶ ಅಥವಾ ಕಬ್ಬಿನ ಗದ್ದೆಗಳಲ್ಲಿ ಮೊಸಳೆ ಕಂಡು ಬಂದಾಗ ಸೆರೆ ಹಿಡಿಯುವ ಸಂದರ್ಭದಲ್ಲಿ ಬಾಯಿಗೆ ಹಗ್ಗ ಕಟ್ಟಿದಾಗ ಮೊಸಳೆ ತಪ್ಪಿಸಿಕೊಂಡಿರುವ ಸಾಧ್ಯತೆ ಇದೆ ಎಂದು ಊಹಿಸಲಾಗಿದೆ. ಕೃಷ್ಣಾ ನದಿಯಲ್ಲಿ ಮೊಸಳೆಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು, ಬೇಸಿಗೆ ವೇಳೆ ನದಿ ತೀರದ ಕಬ್ಬಿನ ಗದ್ದೆಗಳಿಗೆ ಬರುತ್ತವೆ. ಕೆಲವೊಮ್ಮೆ ಜನವಸತಿ ಪ್ರದೇಶಗಳಿಗೂ ಬರುತ್ತವೆ,
ರಾಷ್ಟ್ರೀಯ ಹೆದ್ದಾರಿ ಸೇತುವೆ ಮೇಲೆ ಮೊಸಳೆ ಕಂಡುಬರುತ್ತಲೇ ಸ್ಥಳಕ್ಕೆ ಧಾವಿಸಿರುವ ಕೊಲ್ಹಾರ ಠಾಣೆ ಪೊಲೀಸರು, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಅರಣ್ಯ ಇಲಾಖೆಯ ಅಧಿಕಾರಿಗಳು ಬಂದ ಮೇಲೆ ಮೊಸಳೆ ಬಾಯಿಗೆ ಕಟ್ಟಿರುವ ಹಗ್ಗ ಬಿಚ್ಚಿ, ನದಿಗೆ ಬಿಡುವುದಾಗಿ ಪೊಲೀಸರು ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement