ಬಿಜೆಪಿ ಭ್ರಷ್ಟಾಚಾರ ವಿರೋಧಿಸಿ ಮಾರ್ಚ್‌ 9ರಂದು ಕರ್ನಾಟಕ ಬಂದ್‌ಗೆ ಕರೆಕೊಟ್ಟ ಡಿ.ಕೆ.ಶಿವಕುಮಾರ

ಬೆಂಗಳೂರು: ಬಿಜೆಪಿ ಭ್ರಷ್ಟಾಚಾರ ವಿರೋಧಿಸಿ ಮಾರ್ಚ್ 9ರಂದು ಕರ್ನಾಟಕ ಬಂದ್ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಹೇಳಿದ್ದಾರೆ.
ಸಾರ್ವಜನಿಕರಿಗೆ ತೊಂದರೆ ಆಗದಂತೆ ಮಾರ್ಚ್ 9 ರಂದು ಬೆಳಗ್ಗೆ 9 ಗಂಟೆಯಿಂದ 11 ಗಂಟೆ ವರೆಗೆ ಸಾಂಕೇತಿಕ ಬಂದ್ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಬಿಜೆಪಿ ಸರ್ಕಾರದ ಸಾಧನೆಗಳೆಂದರೆ, ಪ್ರತಿಯೊಂದು ಗುತ್ತಿಗೆಯಲ್ಲೂ 40% ಕಮಿಷನ್ ಪಡೆಯುವುದು. ಶಾಲಾ ಅನುದಾನದಲ್ಲಿ 40% ಕಮಿಷನ್. ಧಾರ್ಮಿಕ ಮಠಗಳ ಅನುದಾನದಲ್ಲಿ 30% ಕಮಿಷನ್. ಮೈಸೂರು ಸ್ಯಾಂಡಲ್ ಸೋಪ್ ಅಕ್ರಮದಲ್ಲಿ ಲಂಚ. ವರ್ಗಾವಣೆ ಮತ್ತು ಪೋಸ್ಟಿಂಗ್ ಗೆ ಲಂಚ ತೆಗೆದುಕೊಳ್ಳುವುದು ಎಂದು ಆರೋಪಿಸಿದ್ದಾರೆ..
ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ಇತ್ತೀಚಿನ ಕೆಎಎಸ್‌ಡಿಎಲ್ ಅಕ್ರಮ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಪಕ್ಷ ಮಾರ್ಚ್ 9 ರಂದು ಕರ್ನಾಟಕ ಬಂದ್‌ಗೆ ಕರೆ ನೀಡುತ್ತಿದೆ ಎಂದು ಹೇಳಿದ್ದಾರೆ.
ಸಾರ್ವಜನಿಕರಿಗೆ ತೊಂದರೆ ಆಗದಂತೆ ಮಾರ್ಚ್ 9 ರಂದು ಬೆಳಗ್ಗೆ 9 ಗಂಟೆಯಿಂದ 11 ಗಂಟೆ ವರೆಗೂ ಸಾಂಕೇತಿಕ ಬಂದ್ ಮಾಡಲಾಗುವುದು. ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆ, ಸಾರಿಗೆ ಹಾಗೂ ಇತರ ಅಗತ್ಯ ಸೇವೆಗಳನ್ನು ಬಂದ್ ವ್ಯಾಪ್ತಿಯಿಂದ ಹೊರಗಿಡಲು ತೀರ್ಮಾನಿಸಲಾಗಿದೆ. ಕಾಂಗ್ರೆಸ್ ಪಕ್ಷ ರಾಜ್ಯದ ಪ್ರತಿ ನಗರದಲ್ಲಿ ಬಿಜೆಪಿ ಹಾಗೂ ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಪ್ರತಿಭಟನೆ ನಡೆಸಲಿದೆ. ನಮ್ಮ ಬೇಡಿಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ನೀಡಬೇಕು ಅಥವಾ ಅವರನ್ನು ವಜಾಗೊಳಿಸಬೇಕು ಎಂಬುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement