ಬಂಟ್ವಾಳ: ವಿವಿಧೆಡೆ ಎನ್ಐಎ ದಾಳಿ

ಮಂಗಳೂರು: ವಿಧ್ವಂಸಕ‌ ಕೃತ್ಯಕ್ಕೆ ಸಂಚು ರೂಪಿಸಿದ ಆರೋಪಿಗಳಿಗೆ ನೆರವು ನೀಡಿದವರ ಪತ್ತೆ ಹಚ್ಚುವ ಸಲುವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಯು ತಂಡವು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿವಿಧೆಡೆ ಸೋಮವಾರ ಶೋಧ ನಡೆಸುತ್ತಿದೆ.
ಬಂಟ್ವಾಳದ ನಂದಾವರದಲ್ಲಿ ನಾಲ್ವರು ಯುವಕರನ್ನು ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳ ತಂಡ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಆ ಯುವಕರ ಖಾತೆಯಿಂದ ಸಂಶಯಾಸ್ಪದ ರೀತಿಯಲ್ಲಿ ಹಣ ವರ್ಗಾವಣೆ ಆಗಿದ್ದರ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎನ್ನಲಾಗಿದೆ.
ಈ ಆರೋಪಿಗಳು ಪಾಟ್ನಾದಲ್ಲಿ ನಡೆದ ಪ್ರಧಾನಿ ಕಾರ್ಯಕ್ರಮದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕರ ಜೊತೆ ಸಂಪರ್ಕ ಇದ್ದು, ಅವರಿಗೆ ಹಣಕಾಸಿನ ನೆರವು ಒದಗಿಸಿದ್ದಾರೆ ಎಂಬ ಆರೋಪದಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಆದರೆ ನಿರ್ದಿಷ್ಟವಾಗಿ ಯಾವ ಪ್ರಕರಣಕ್ಕೆ ಸಂಬಂಧಿಸಿ ದಾಳಿ ನಡೆಸಲಾಗಿದೆ ಎಂಬುದನ್ನು ಎನ್‌ಐಎ ಇನ್ನೂ ಬಹಿರಂಗಪಡಿಸಿಲ್ಲ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement