ಮನೀಶ್ ಸಿಸೋಡಿಯಾಗೆ 14 ದಿನಗಳ ನ್ಯಾಯಾಂಗ ಬಂಧನ, ತಿಹಾರ್ ಜೈಲಿಗೆ

ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಬಂಧನದ ನಂತರ ಒಂದು ವಾರದಿಂದ ಸಿಬಿಐ ಕಸ್ಟಡಿಯಲ್ಲಿದ್ದರು. ನ್ಯಾಐಾಂಗ ಬಂಧನದ ಹಿನ್ನೆಲೆಯಲ್ಲಿ ಮಾರ್ಚ್ 20 ರವರೆಗೆ ಸಿಸೋಡಿಯಾ ಅವರನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗುತ್ತದೆ.
ಈಗ ರದ್ದಾದ ಮದ್ಯ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು ಬಂಧಿಸಲಾಗಿದೆ.
ವಿಚಾರಣೆಯ ಸಂದರ್ಭದಲ್ಲಿ, ಸಿಬಿಐ ನ್ಯಾಯಾಲಯಕ್ಕೆ ಸಂಸ್ಥೆಯು ಹೆಚ್ಚಿನ ಕಸ್ಟಡಿಯನ್ನು ಕೋರುತ್ತಿಲ್ಲ, ಭವಿಷ್ಯದಲ್ಲಿ ಬೇಕಾದಾಗ ಕೋರುತ್ತೇವೆ ಎಂದು ತಿಳಿಸಿದರು. ಆದರೆ “ಆರೋಪಿಯ ನಡವಳಿಕೆ ಸರಿಯಾಗಿಲ್ಲ” ಎಂದು ಹೇಳಿದರು. ಅವರು ಸಾಕ್ಷಿಗಳನ್ನು ಭಯಭೀತಗೊಳಿಸುತ್ತಿದ್ದಾರೆ. ಅವರು ವಿಚಾರಣೆಗೆ ರಾಜಕೀಯ ಬಣ್ಣ ನೀಡುತ್ತಿದ್ದಾರೆ” ಎಂದು ಸಿಬಿಐ ನ್ಯಾಯಾಲಯಕ್ಕೆ ಹೇಳಿದೆ.

ಇಡೀ ದಿನ ಬೆಳಿಗ್ಗೆಯಿಂದ ಸಂಜೆಯವರೆಗೆ ನನಗೆ ಒಂದೇ ರೀತಿಯ ಪ್ರಶ್ನೆಗಳನ್ನು ಕೇಳಲಾಗುತ್ತಿದೆ. ಇದರಿಂದ ನನಗೆ ಮಾನಸಿಕ ಕಿರುಕುಳವಾಗಿದೆ” ಎಂದು ಸಿಸೋಡಿಯಾ ಅವರ ಸಿಬಿಐ ಬಂಧನವನ್ನು ಶನಿವಾರ ಇನ್ನೂ ಎರಡು ದಿನಗಳವರೆಗೆ ವಿಸ್ತರಿಸಿದ ಕೂಡಲೇ ಕೋರ್ಟ್‌ಗೆ ತಿಳಿಸಿದ್ದರು. ನ್ಯಾಯಾಲಯವು ಈ ಹಿಂದೆ ಅನುಮತಿಸಿದ್ದ 7 ದಿನಗಳ ಕಸ್ಟಡಿ ವಿಚಾರಣೆಯ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ಇಂದು, ಸೋಮವಾರ ವಿಶೇಷ ನ್ಯಾಯಾಧೀಶ ಎಂ.ಕೆ.ನಾಗಪಾಲ ಅವರ ಮುಂದೆ ಹಾಜರುಪಡಿಸಲಾಯಿತು.
ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಸಿಸೋಡಿಯಾ ನುಣುಚಿಕೊಳ್ಳುವ ಉತ್ತರಗಳನ್ನು ನೀಡಿದ್ದರಿಂದ ಮತ್ತು ಸಾಕ್ಷ್ಯಾಧಾರಗಳೊಂದಿಗೆ ತನಿಖೆಗೆ ಸಹಕರಿಸದ ಕಾರಣ ಅವರನ್ನು ಬಂಧಿಸಲಾಗಿದೆ ಎಂದು ಸಿಬಿಐ ಆರೋಪಿಸಿದೆ.
ಏತನ್ಮಧ್ಯೆ, ಸಿಸೋಡಿಯಾ ಅವರು ದೆಹಲಿ ನ್ಯಾಯಾಲಯದ ಮುಂದೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ, ಮಾರ್ಚ್ 10 ರಂದು ವಿಚಾರಣೆಗೆ ತೆಗೆದುಕೊಳ್ಳಲಾಗುತ್ತದೆ. ನ್ಯಾಯಾಲಯವು ತನ್ನ ಉತ್ತರವನ್ನು ಸಲ್ಲಿಸಲು ಸಿಬಿಐಗೆ ಕೇಳಿದೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2ನೇ ಹಂತದ ಮತದಾನ : ಶ್ರೀಮಂತ ಅಭ್ಯರ್ಥಿ ₹ 622 ಕೋಟಿ ಒಡೆಯ, ಅತ್ಯಂತ ಬಡ ಅಭ್ಯರ್ಥಿ ಬಳಿ ಇರುವುದು ಕೇವಲ...

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement