ಉದ್ಯೋಗಕ್ಕಾಗಿ ಭೂ ಹಗರಣ: ಪತ್ನಿ ರಾಬ್ರಿ ದೇವಿ ವಿಚಾರಣೆ ಮರುದಿನ ಆರ್‌ಜೆಡಿ ಮುಖ್ಯಸ್ಥ ಲಾಲು ಅವರನ್ನು ಪ್ರಶ್ನಿಸಿದ ಸಿಬಿಐ

ನವದೆಹಲಿ: ರೈಲ್ವೆ ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳವಾರ ಮಾಜಿ ರೈಲ್ವೆ ಸಚಿವ ಲಾಲುಪ್ರಸಾದ ಯಾದವ್ ಅವರ ವಿಚಾರಣೆ ಆರಂಭಿಸಿದೆ. ಇದೇ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರನ್ನು ತನಿಖಾ ಸಂಸ್ಥೆ ಪ್ರಶ್ನಿಸಿದ ಒಂದು ದಿನದ ನಂತರ ಸಿಬಿಐ ಲಾಲು ಅವರನ್ನು ವಿಚಾರಣೆ ನಡೆಸುತ್ತಿದೆ.
ಯಾದವ ದಂಪತಿ ಮತ್ತು ಅವರ ಪುತ್ರಿಯರಾದ ಮಿಸಾ ಮತ್ತು ಹೇಮಾ ಸೇರಿದಂತೆ ಇತರರನ್ನು ಹೆಸರಿಸಿರುವ ಸಿಬಿಐ ಪ್ರಕರಣದಲ್ಲಿ ಲಾಲು ಯಾದವ 2004 ರಿಂದ 2009 ರವರೆಗೆ ಕೇಂದ್ರ ರೈಲ್ವೆ ಸಚಿವರಾಗಿದ್ದಾಗ ಯಾದವ್ ಮತ್ತು ಅವರ ಕುಟುಂಬ ಸದಸ್ಯರು ಉದ್ಯೋಗಕ್ಕಾಗಿ ರಿಯಾಯಿತಿಯಲ್ಲಿ ಭೂಮಿ ಪಡೆದುಕೊಂಡಿದ್ದಾರೆ ಎಂಬ ಆರೋಪವನ್ನು ಆಧರಿಸಿದೆ.
ಲಾಲು ಯಾದವ, ಅವರ ಪತ್ನಿ ಮತ್ತು ಪುತ್ರಿಯರಲ್ಲದೆ, ಭೂಮಿಗೆ ಬದಲಾಗಿ ಉದ್ಯೋಗ ಪಡೆದ 12 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕಳೆದ ವರ್ಷ ಜುಲೈನಲ್ಲಿ, ಯಾದವ್ ಅವರ ಸಹಾಯಕ ಮತ್ತು ವಿಶೇಷ ಕರ್ತವ್ಯದ ಮಾಜಿ ಅಧಿಕಾರಿ (OSD) ಭೋಲಾ ಯಾದವ್ ಅವರನ್ನು ಈ ಪ್ರಕರಣದಲ್ಲಿ ಸಿಬಿಐ ಬಂಧಿಸಿತ್ತು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   15 ವರ್ಷಗಳ ಹಿಂದಿನ ಪ್ರಕರಣ ಭೇದಿಸಲು ಪೊಲೀಸರಿಗೆ ಸಹಾಯ ಮಾಡಿದ ಹಚ್ಚೆ

ಆರೋಪಿಗಳು ಸೆಂಟ್ರಲ್ ರೈಲ್ವೇಯ ಮಾಜಿ ಜಿಎಂ ಮತ್ತು ಸೆಂಟ್ರಲ್ ರೈಲ್ವೇಯ ಸಿಪಿಒ ಅವರೊಂದಿಗೆ ಸೇರಿ ತಮ್ಮ ಹೆಸರಿನಲ್ಲಿ ಅಥವಾ ಅವರ ಹತ್ತಿರದ ಸಂಬಂಧಿಗಳ ಹೆಸರಿನಲ್ಲಿ ಭೂಮಿ ನೀಡಿದ ಅಭ್ಯರ್ಥಿಗಳಿಗೆ ಉದ್ಯೋಗ ನೀಡುವ ಸಂಚು ರೂಪಿಸಿದ್ದರು ಎಂದು ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಹೇಳಿಕೊಂಡಿದೆ. ಈ ಭೂಮಿಯನ್ನು ಖರೀದಿಸಲು ತಗುಲುವ ವೆಚ್ಚವು ಮಾರುಕಟ್ಟೆ ದರಕ್ಕಿಂತ ಕಡಿಮೆ ಬಹಳ ಕಡಿಮೆಯಾಗಿದೆ ಎಂದು ಅದು ಹೇಳಿದೆ.ಅಭ್ಯರ್ಥಿಗಳು ನಕಲಿ ಟಿಸಿ ಮತ್ತು ನಕಲಿ ದೃಢೀಕೃತ ದಾಖಲೆಗಳನ್ನು ರೈಲ್ವೇ ಸಚಿವಾಲಯಕ್ಕೆ ಸಲ್ಲಿಸಿದ್ದಾರೆ ಎಂಬ ಆರೋಪವೂ ಇದೆ ಎಂದು ಸಿಬಿಐ ಹೇಳಿಕೆಯಲ್ಲಿ ಹೇಳಿಕೊಂಡಿದೆ.
ಲಾಲು ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ಅವರು ಲಾಲು ಯಾದವ ಅವರಿಗೆಕಿರುಕುಳ ನೀಡುತ್ತಿದ್ದಾರೆ ಆರೋಪಿಸಿದ್ದಾರೆ ಮತ್ತು ಅವರಿಗೆ ಏನಾದರೂ ಸಂಭವಿಸಿದರೆ ಯಾರನ್ನೂ ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಲಾಲು ಪ್ರಸಾದ ಯಾದವ, ರಾಬ್ರಿ ದೇವಿ ಮತ್ತು ಇತರ 14 ಜನರ ವಿರುದ್ಧ ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಸಿಬಿಐ ಈಗಾಗಲೇ ಆರೋಪಪಟ್ಟಿ ಸಲ್ಲಿಸಿದ್ದು, ಮಾರ್ಚ್ 15 ರಂದು ಹಾಜರಾಗುವಂತೆ ಎಲ್ಲಾ ಆರೋಪಿಗಳಿಗೆ ಸಮನ್ಸ್ ನೀಡಲಾಗಿದೆ.

ಇಂದಿನ ಪ್ರಮುಖ ಸುದ್ದಿ :-   ಭಾರತದ ಧ್ವನಿಗಾಗಿ ಹೋರಾಡ್ತೇನೆ, ಅದಕ್ಕಾಗಿ ಯಾವುದೇ ಬೆಲೆ ತೆರಲು ಸಿದ್ಧ: ಅನರ್ಹಗೊಂಡ ನಂತರ ರಾಹುಲ್‌ ಗಾಂಧಿ ಮೊದಲ ಪ್ರತಿಕ್ರಿಯೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement