ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಭೂಕುಸಿತ : 1 ಸಾವು, 6 ಮಂದಿಗೆ ಗಾಯ | ದೃಶ್ಯ ವೀಡಿಯೊದಲ್ಲಿ ಸೆರೆ

ಬನಿಹಾಲ್/ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಮಬಾನ್ ಜಿಲ್ಲೆಯಲ್ಲಿ ಮಂಗಳವಾರ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಆಯಕಟ್ಟಿನ ಹೆದ್ದಾರಿಯಲ್ಲಿ ದ್ವಿಮುಖ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಹಿರಿಯ ಪೊಲೀಸ್ ಅಧೀಕ್ಷಕ (ರಾಂಬನ್) ಮೋಹಿತಾ ಶರ್ಮಾ ಅವರು ರಾಂಬನ್ ಪಟ್ಟಣಕ್ಕೆ ಸಮೀಪವಿರುವ ಸೆರಿ ಗ್ರಾಮದ ಬಳಿಹೆದ್ದಾರಿಯ ಮೇಲಿನ ಭಾರಿ ಭೂಕುಸಿತ ಸಂಭವಿಸಿದ್ದು, ಏಳು ಜನರಿಗೆ ಗಾಯಗಳಾಗಿವೆ. ಈ ಹೆದ್ದಾರಿ 270 ಕಿಮೀ ಉದ್ದವಿದೆ ಎನ್ನಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಘಟನೆಯಲ್ಲಿ ಗಾಯಗೊಂಡಿದ್ದ ಒಬ್ಬರಾದ ಸುಂಬರ್‌ನ ಸುರ್ಜೀತ್ ಸಿಂಗ್ ಅವರು ತೀವ್ರ ಗಾಯಗಳಿಂದಾಗಿ ಮೃತಪಟ್ಟರು ಎಂದು ಎಸ್‌ಎಸ್‌ಪಿ ಹೆದ್ದಾರಿಯ ಉಸ್ತುವಾರಿ ವಹಿಸಿರುವ ಶರ್ಮಾ ಹೇಳಿದರು. ಗಾಯಾಳುಗಳಾದ ಮೊಹಮ್ಮದ್ ತಾಜ್, ಹಮೀದ್, ರುಬೀನಾ ಬೇಗಂ, ಸಕೀನಾ ಬೇಗಂ, ಸಲ್ಮಾ ಬಾನಿ ಮತ್ತು ಅಮೀರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು.ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅವರು ಹೇಳಿದರು.

ಇಂದಿನ ಪ್ರಮುಖ ಸುದ್ದಿ :-   ಭಾರತದ ಧ್ವನಿಗಾಗಿ ಹೋರಾಡ್ತೇನೆ, ಅದಕ್ಕಾಗಿ ಯಾವುದೇ ಬೆಲೆ ತೆರಲು ಸಿದ್ಧ: ಅನರ್ಹಗೊಂಡ ನಂತರ ರಾಹುಲ್‌ ಗಾಂಧಿ ಮೊದಲ ಪ್ರತಿಕ್ರಿಯೆ

ಭೂಕುಸಿತದಿಂದ ಕನಿಷ್ಠ ಎರಡು ವಾಹನಗಳು ಜಖಂಗೊಂಡಿದ್ದು, ರಸ್ತೆ ಸಂಪೂರ್ಣ ಬಂದ್ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅವರು ಹೇಳಿದರು.

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

4.5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement