ತಾಯಿ, ಇಬ್ಬರು ಮಕ್ಕಳು ಸಜೀವ ದಹನ: ಶಾರ್ಟ್‌ ಸರ್ಕಿಟ್‌ನಿಂದ ಎಸಿ ಸ್ಫೋಟಗೊಂಡ ಶಂಕೆ

ರಾಯಚೂರು: ಶಾರ್ಟ್‌ ಸರ್ಕಿಟ್‌ನಿಂದ ಮನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದಾಗಿ ಮನೆಯೊಳಗಿದ್ದ ತಾಯಿ ಹಾಗೂ ಇಬ್ಬರು ಮಕ್ಕಳು ದಹನವಾಗಿರುವ ದುರಂತ ಘಟನೆ ರಾಯಚೂರು ಜಿಲ್ಲೆಯ ಶಕ್ತಿನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಶಕ್ತಿನಗರದ ಕೆಪಿಸಿ ಕ್ವಾಟ್ರಸ್‌ನಲ್ಲಿ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದ್ದು ಮೃತರನ್ನು ಮಂಡ್ಯ ಮೂಲದ ರಂಜಿತಾ(33), ಮಕ್ಕಳಾದ ಮೃದಲ (13), ತಾರುಣ್ಯ(5) ಎಂದು ಗುರುತಿಸಲಾಗಿದೆ. ಶಾರ್ಟ್‌ ಸರ್ಕಿಟ್‌ನಿಂದ ಮನೆಯಲ್ಲಿದ್ದ ಎಸಿ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದರೆ ಸ್ಪಷ್ಟವಾದ ಕಾರಣ ತಿಳಿದುಬರಬೇಕಿದೆ.
ಮೃತ ರಂಜಿತಾ ಪತಿ ಸಿದ್ದಲಿಂಗಯ್ಯ ಸ್ವಾಮಿ ಆರ್‌ಟಿಪಿಎಸ್‌ನಲ್ಲಿ ಎಇಇ ಆಗಿ ಕೆಲಸ ಮಾಡುತ್ತಿದ್ದು, ಇವರು ಕೆಲಸಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಶಕ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ನಿಮ್ಮ ಕಾಮೆಂಟ್ ಬರೆಯಿರಿ

advertisement