ಶಿವಮೊಗ್ಗ: ದೇವಸ್ಥಾನದ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

ಶಿವಮೊಗ್ಗ : ಕಿಡಿಗೇಡಿಗಳು ದೇವಸ್ಥಾನವೊಂದರ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಶಿವಮೊಗ್ಗದಲ್ಲಿ ನಡೆದ ಘಟನೆ ವರದಿಯಾಗಿದೆ. ಘಟನೆಯಲ್ಲಿ ರಥಕ್ಕೆ ಹಾನಿಯಾಗಿದೆ.
ಶಿವಮೊಗ್ಗದ ರಾಗಿಗುಡ್ಡದ ಬ್ರಹ್ಮ, ವಿಷ್ಣು, ಮಹೇಶ್ವರ ದೇವಸ್ಥಾನದ ರಥಕ್ಕೆ ಬೆಂಕಿ ಹಚ್ಚಲಾಗಿದೆ. ಘಟನೆಯಿಂದ ರಥ ಬಹುಪಾಲು ಹಾನಿಗೊಳಗಾಗಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಾರ್ಚ್‌ 4ರಂದು ಸಂಜೆ 4 ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ ಎಂದು ದೇವಸ್ಥಾನದ ಅರ್ಚಕರು ದೂರಿನಲ್ಲಿ ತಿಳಿಸಿದ್ದಾರೆ.
ಮಾಸ್ಕ್ ಧರಿಸಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಇದರಿಂದ ರಥಕ್ಕೆ ಸಂಪೂರ್ಣವಾಗಿ ಹಾನಿಯಾಗಿದೆ ಎಂದು ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

2.5 / 5. 4

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

ನಿಮ್ಮ ಕಾಮೆಂಟ್ ಬರೆಯಿರಿ

advertisement