ಮಾರ್ಚ್‌ 21ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಯುಗಾದಿಗೆ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಡೌಟ್‌

ಬೆಂಗಳೂರು: ವೇತನ ಪರಿಷ್ಕರಣೆ ಹಾಗೂ ಇನ್ನಿತರೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮಾರ್ಚ್‌ 21ರಿಂದ ಬಸ್‌ ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಹೀಗಾಗಿ ಯುಗಾದಿ ಹಬ್ಬಕ್ಕೆ ಮುನ್ನವೇ ರಾಜ್ಯಾದ್ಯಂತ 23 ಸಾವಿರ ಬಸ್‌ಗಳ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆಗಳು ದಟ್ಟವಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಒಮ್ಮತದ ನಿರ್ಣಯ ಕೈಗೊಂಡಿದೆ. ವೇತನ ಪರಿಷ್ಕರಣೆ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮಾರ್ಚ್‌ 21ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಹೀಗಾಗಿ ಯುಗಾದಿ ಹಬ್ಬಕ್ಕೆ ಮುನ್ನವೇ ರಾಜ್ಯಾದ್ಯಂತ 23 ಸಾವಿರ ಬಸ್‌ಗಳ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆಗಳಿವೆ.
ವಿಧಾನಸಭಾಚುನಾವಣೆ ಘೋಷಣೆಗೆ ಮುನ್ನವೇ ವೇತನ ಪರಿಷ್ಕರಣೆಗೆ ಸರಕಾರ ಕ್ರಮ ಕೈಗೊಳ್ಳಬೇಕಿದೆ. ಹೀಗಾಗಿ ಸರಕಾರದ ಒತ್ತಡ ಹೇರಲು ಮಾ. 21ರ ಬೆಳಗ್ಗೆ 6 ರಿಂದ ಎಲ್ಲ ಬಸ್‌ಗಳ ಸಂಚಾರವನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸಲಾಗುತ್ತಿದೆ. ಮಾರ್ಚ್‌ 20ರ ರಾತ್ರಿಯಿಂದಲೇ ಬಸ್‌ಗಳು ರಸ್ತೆಗಿಳಿಯುವುದಿಲ್ಲ. 1 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದು, ಸುಮಾರು 23 ಸಾವಿರ ಬಸ್‌ಗಳು ಸ್ಥಗಿತಗೊಳ್ಳಲಿವೆ. ಯಾವುದೇ ಕಾರಣಕ್ಕೂ ಡಿಪೋದಿಂದ ಬಸ್‌ಗಳನ್ನು ತೆಗೆಯುವುದಿಲ್ಲ ಎಂದು ಕೆಎಸ್‌ಆರ್‌ಟಿಸಿ ಸ್ಟಾಫ್‌ ಆ್ಯಂಡ್‌ ವರ್ಕರ್ಸ್‌ ಫೆಡರೇಷನ್‌ನ ಅಧ್ಯಕ್ಷ ಎಚ್‌ವಿ ಅನಂತಸುಬ್ಬರಾವ್‌ ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಪ್ರಮುಖ ಸುದ್ದಿ :-   ʼಗೋವಾದ ಮೇಲೆ ಬಲವಂತವಾಗಿ ಭಾರತದ ಸಂವಿಧಾನದ ಹೇರಿಕೆ ; ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಯಿಂದ ಭುಗಿಲೆದ್ದ ವಿವಾದ : ದೇಶ ಒಡೆಯುವ ಹುನ್ನಾರ ಎಂದ ಪ್ರಧಾನಿ ಮೋದಿ

ಸಾರಿಗೆ ನೌಕರರ ವೇತನ ಹೆಚ್ಚಳ ಮಾಡುವಂತೆ ಹಲವು ಸಲ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಫೆಬ್ರವರಿ 21ರಂದು ನಡೆದ ಅಂಬಾರಿ ಉತ್ಸವ ಬಸ್‌ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ವಿಧಾನ ಮಂಡಲದ ಅಧಿವೇಶನ ಮುಗಿದ ಕೂಡಲೇ ಸಭೆ ಕರೆದು ಬೇಡಿಕೆಗಳನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದರು. ಆದರೆ, ಅದು ಆಗಿಲ್ಲ ಎಂದು ಅವರು ಹೇಳಿದರು.
‘ಸಾರಿಗೆ ಸಚಿವ ಶ್ರೀರಾಮುಲು ಅವರು ಮಾರ್ಚ್‌ 8ರಂದು ಸಭೆ ಕರೆಯಲ್ಲಿ ಮೂಲ ವೇತನದ ಶೇ 10ರಷ್ಟು ಸಂಬಳ ಹೆಚ್ಚಳ ಮಾಡುವ ಪ್ರಸ್ತಾಪಕ್ಕೆ ನಾವು ಒಪ್ಪಿಕೊಂಡಿಲ್ಲ. ಆಗ ಎರಡು ದಿನಗಳೊಳಗೆ ಮತ್ತೊಮ್ಮೆ ಸಭೆ ನಡೆಸಿ ಅಲ್ಲಿ ಅಂತಿಮ ತೀರ್ಮಾನ ಪ್ರಕಟಿಸುವುದಾಗಿ ಹೇಳಿದ್ದರು. ಆದರೆ, ಈವರೆಗೆ ಸಭೆ ಕರೆದಿಲ್ಲ ಎಂದರು.
ಸರಕಾರಿ ನೌಕರರಿಗೆ ಮಧ್ಯಂತರ ಪರಿಹಾರವಾಗಿ ಶೇ.17ರಷ್ಟು ವೇತನ ಹೆಚ್ಚಳ ಮಾಡಿದೆ. ಸಾರಿಗೆ ನೌಕರರಿಗೆ 2016ರ ಜ. 1ರಿಂದ ಅನ್ವಯವಾಗುವಂತೆ ಶೇ 12.5ರಷ್ಟು ವೇತನ ಹೆಚ್ಚಳ ಮಾಡಲಾಗಿತ್ತು. ನಂತರ ಸಂಬಳ ಪರಿಷ್ಕರಿಸಿಲ್ಲ. ಕೈಗಾರಿಕಾ ಒಪ್ಪಂದದನ್ವಯ 2020ರ ಜ. 1ರಿಂದ ವೇತನ ಪರಿಷ್ಕರಣೆಯಾಗಬೇಕಿತ್ತು ಎಂದು ತಿಳಿಸಿದರು.

ಸಾರಿಗೆ ನೌಕರರ ಬೇಡಿಕೆಗಳು
* ಮೂಲ ವೇತನಕ್ಕೆ ಬಿ.ಡಿ.ಎ ವಿಲೀನಗೊಳಿಸಿ, ಮೂಲ ವೇತನವನ್ನು ಶೇ.25ರಷ್ಟು ಹೆಚ್ಚಿಸಬೇಕು.
* ವೇತನ ಹೆಚ್ಚಳವು ಪರಿಷ್ಕೃತ ಮೂಲ ವೇತನದ ಶೇ.3ರಷ್ಟಿರಬೇಕು
* ಆಯ್ಕೆ ಶ್ರೇಣಿ ಹಾಗೂ ಉನ್ನತ ಶ್ರೇಣಿಗಳ ವೇತನ ಶ್ರೇಣಿಯನ್ನೂ ಮೇಲಿನಂತೆಯೇ ಸಿದ್ಧಪಡಿಸಬೇಕು. ವೇತನ ಬಡ್ತಿ ದರವು ಪರಿಷ್ಕೃತ ಮೂಲ ವೇತನದ ಶೇ 3ರಷ್ಟಿರಬೇಕು. ಆಯ್ಕೆ ಶ್ರೇಣಿ ಬಡ್ತಿಯನ್ನು ಸೇವಾವಧಿಯ ಪ್ರತಿ 10 ವರ್ಷಕ್ಕೆ ನೀಡಬೇಕು.
* ಎಲ್ಲ ನೌಕರರಿಗೂ ಹಾಲಿ ಇರುವ ಬಾಟಾ, ಮಾಸಿಕ, ದೈನಂದಿನ ಭತ್ಯೆಗಳನ್ನು ಐದು ಪಟ್ಟು ಜಾಸ್ತಿ ಮಾಡಬೇಕು.
* 2021ರ ಏಪ್ರಿಲ್‌ನಲ್ಲಿ ಮುಷ್ಕರ ನಡೆಸಿದ ಸಂದರ್ಭದಲ್ಲಿ ಸೇವೆಯಿಂದ ವಜಾಗೊಳಿಸಿದ ನೌಕರರನ್ನು ಮರು ನೇಮಕ ಮಾಡಬೇಕು.
* ವರ್ಗಾವಣೆ ಶಿಕ್ಷೆಗೆ ಒಳಗಾದ ಸಿಬ್ಬಂದಿ, ನೌಕರರನ್ನು ಮೂಲ ಘಟಕಕ್ಕೆ ಮರು ನಿಯೋಜಿಸಬೇಕು ಹಾಗೂ ಮುಷ್ಕರದ ವೇಳೆ ಎಫ್‌ಐಆರ್‌ ದಾಖಲಿಸಿರುವ ನೌಕರರನ್ನು ಕೆಲಸಕ್ಕೆ ವಾಪಸ್‌ ತೆಗೆದುಕೊಳ್ಳಬೇಕು.
* ಕೈಗಾರಿಕಾ ವಿವಾದ ಕಾಯಿದೆ 1947ರ ಅನ್ವಯ ಜಂಟಿ ಕ್ರಿಯಾ ಸಮಿತಿಯ ಜೊತೆ ಕೈಗಾರಿಕಾ ಒಪ್ಪಂದ ಮಾಡಬೇಕು. ಇದು 2020ರ ಜನವರಿ 1 ರಿಂದ 2023ರ ಡಿಸೆಂಬರ್‌ 31ರವರೆಗೆ ಜಾರಿಯಲ್ಲಿರಬೇಕು ಎಂಬ ಬೇಡಿಕೆಗಳನ್ನು ಇಡಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟವು 2021ರ ಏಪ್ರಿಲ್‌ನಲ್ಲಿ ರೈತ ಸಂಘದ ಕೋಡಿಹಳ್ಳಿ ಚಂದ್ರಶೇಖರ್‌ ನೇತೃತ್ವದಲ್ಲಿ15 ದಿನಗಳ ಕಾಲ ಬಸ್‌ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸಿತ್ತು. ಆಗ ಸರ್ಕಾರ ಮುಷ್ಕರದಲ್ಲಿ ಭಾಗಿಯಾಗಿದ್ದ ನೂರಾರು ನೌಕರರನ್ನು ಸೇವೆಯಿಂದ ವಜಾಗೊಳಿಸಿತು.

ಪ್ರಮುಖ ಸುದ್ದಿ :-   100 ವರ್ಷಗಳಲ್ಲಿ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮೊದಲ ಮಹಿಳಾ ಉಪಕುಲಪತಿ ನೇಮಕ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement