ಮಾರ್ಚ್ 21ರ ಮುಷ್ಕರ ಹಿಂಪಡೆದ ಸಾರಿಗೆ ನಿಗಮದ ಸಿಬ್ಬಂದಿ

posted in: ರಾಜ್ಯ | 0

ಬೆಂಗಳೂರು: ರಾಜ್ಯ ಸರ್ಕಾರ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ಶೇ.15 ರಷ್ಟು ವೇತನ ಹೆಚ್ಚಳ ಘೋಷಿಸಿದ ಬೆನ್ನಲ್ಲೇ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರೊಂದಿಗೆ ಸಭೆ ನಡೆಸಿದ ಜಂಟಿ ಕ್ರಿಯಾ ಸಮಿತಿಯು ಮುಷ್ಕರ ಹಿಂಪಡೆಯಲು ನಿರ್ಧರಿಸಿದೆ. 21ರಂದು ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸುಬ್ಬರಾವ್, ”ಸರಕಾರ ಶೇ.15ರಷ್ಟು ವೇತನ ಹೆಚ್ಚಿಸಿದೆ, ಆದರೆ ಬಾಕಿ ಪಾವತಿ ಬಗ್ಗೆ ಸ್ಪಷ್ಟತೆ ಇಲ್ಲ. ಸರ್ಕಾರದ ನಿರ್ಧಾರದಿಂದ ನಮಗೆ ಇನ್ನೂ ತೃಪ್ತಿಯಿಲ್ಲ, ಆದರೆ ಸರ್ಕಾರವು ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಕಾರಣ ನಾವು ಮುಷ್ಕರವನ್ನು ಹಿಂಪಡೆಯುತ್ತಿದ್ದೇವೆ ಎಂದು ತಿಳಿಸಿದರು.“1-1-2020 ರಿಂದ ಜಾರಿಗೆ ಬರುವಂತೆ ಪರಿಷ್ಕೃತ ವೇತನವನ್ನು ಸರ್ಕಾರವು ಭರವಸೆ ನೀಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿತ್ತು. ಸರ್ಕಾರದ ಅಧಿಸೂಚನೆ ಸ್ಪಷ್ಟವಾಗಿಲ್ಲ” ಎಂದು ಸುಬ್ಬರಾವ್ ಹೇಳಿದರು.
ಇದರ ಬೆನ್ನಲ್ಲೇ, ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಮತ್ತು ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಗಳ ನಾಲ್ಕು ಸರ್ಕಾರಿ ಸ್ವಾಮ್ಯದ ರಸ್ತೆ ಸಾರಿಗೆ ನಿಗಮಗಳ ನೌಕರರು ಪ್ರತಿಭಟನೆ ಹಿಂಪಡೆದಿದ್ದಾರೆ.
ಈ ಹಿಂದೆ ಮುಷ್ಕರ ನಡೆಸುವುದಾಗಿ ಸುಬ್ಬರಾವ್ ಹೇಳಿದ್ದರು, ಆದರೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರೊಂದಿಗಿನ ಸಭೆಯ ನಂತರ ಅವರು ನಿರ್ಧಾರವನ್ನು ಬದಲಾಯಿಸಿದರು. ಆದಾಗ್ಯೂ, ಕೆಲವು ಸಾರಿಗೆ ನೌಕರರ ಸಂಘಟನೆಗಳು ಸುಬ್ಬರಾವ್ ಅವರ ನಿರ್ಧಾರವನ್ನು ವಿರೋಧಿಸುತ್ತಿವೆ ಮತ್ತು ಮಾರ್ಚ್ 24 ರಂದು ಮುಷ್ಕರಕ್ಕೆ ಕರೆ ನೀಡಿವೆ.
ನಮ್ಮ ಸಂಘಟನೆ ಮುಷ್ಕರ್‌ ವಾಪಸ್‌ ಪಡೆದಿಲ್ಲ…
ಸಾರಿಗೆ ನೌಕರರ ಸಮಾನ ಮನಸ್ಕ ಸಂಘದ ಅಧ್ಯಕ್ಷ ಚಂದ್ರಶೇಖರ ಮಾತನಾಡಿ, ಸರಕಾರ ಹೊರಡಿಸಿರುವ ಆದೇಶದಲ್ಲಿ ನಮ್ಮ ಬೇಡಿಕೆ ಈಡೇರಿಲ್ಲ. ಬಾಕಿ ವೇತನ ಹಾಗೂ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಗೊಂದಲವಿದೆ. ಜಂಟಿ ಕ್ರಿಯಾ ಸಮಿತಿಯು ಸರಿಯಾದ ಪ್ರಕ್ರಿಯೆ ಅನುಸರಿಸದೆ ಪ್ರತಿಭಟನೆಯನ್ನು ಹಿಂಪಡೆದಿದೆ ಮತ್ತು ಅವರು ನೌಕರರನ್ನು ದಾರಿ ತಪ್ಪಿಸುತ್ತಿದ್ದಾರೆ. ಸರ್ಕಾರದ ಪ್ರತಿನಿಧಿಯೊಂದಿಗೆ ಅನಂತ ಸುಬ್ಬರಾವ್ ಏನು ಮಾತನಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಸರ್ಕಾರದ ಆದೇಶದ ಪ್ರತಿ ಬರುವವರೆಗೆ ನಾವು ಕಾಯುತ್ತೇವೆ ಮತ್ತು ಅದರ ಭರವಸೆಗಳ ಬಗ್ಗೆ ದೃಢೀಕರಣ ಮತ್ತು ಸ್ಪಷ್ಟತೆಯ ನಂತರವೇ ನಾವು ಮುಷ್ಕರವನ್ನು ಹಿಂಪಡೆಯುತ್ತೇವೆ. ಇಲ್ಲದಿದ್ದರೆ ಯಾವುದೇ ಕಾರಣಕ್ಕೂ ಮುಷ್ಕರ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಬೆಂಗಳೂರಲ್ಲಿ ಒಂದೇ ದಿನ 100ಕ್ಕಿಂತ ಹೆಚ್ಚು ಕೋವಿಡ್‌ ಪ್ರಕರಣಗಳು ದಾಖಲು: ರಾಜ್ಯದಲ್ಲಿ ಏರಿಕೆಯತ್ತ ಕೊರೊನಾ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement