ರಾಜ್ಯದಲ್ಲಿ ನಿಧಾನಗತಿಯಲ್ಲಿ ಏರುತ್ತಿರುವ ಕೊರೊನಾ, ಭಾನುವಾರ 78 ಮಂದಿಗೆ ಸೋಂಕು, ಓರ್ವ ಸಾವು

posted in: ರಾಜ್ಯ | 0

ಬೆಂಗಳೂರು: ದೇಶದಲ್ಲಿ ಕೋವಿಡ್-19 ಸಂಖ್ಯೆ ಏರಿಕೆಯಾಗುತ್ತಿದ್ದು, ಕರ್ನಾಟಕದಲ್ಲಿಯೂ ಕೊರೊನಾ ಸಂಖ್ಯೆ ಏರಿಕೆಯಾಗುತ್ತಿವೆ. ಇಂದು, ಭಾನುವಾರ ರಾಜ್ಯಾದ್ಯಂತ 78 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೆ, ಒಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಬಳ್ಳಾರಿ, ಕೋಲಾರ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಮೂವರಿಗೆ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಹಾಸನ, ಹಾವೇರಿ, ಕೊಪ್ಪಳ, ರಾಮನಗರ ಹಾಗೂ ವಿಜಯಪುರದಲ್ಲಿ ತಲಾ ಒಬ್ಬರಿಗೆ, ಶಿವಮೊಗ್ಗದಲ್ಲಿ 7, ರಾಯಚೂರಿನಲ್ಲಿ 2, ಮೈಸೂರಿನಲ್ಲಿ 11, ಧಾರವಾಡ ಮತ್ತು ಬೀದರಿನಲ್ಲಿ ಇಬ್ಬರು ಬೆಂಗಳೂರು ನಗರದಲ್ಲಿ 35 ಜನರು ಸೇರಿದಂತೆ ಒಟ್ಟು 78 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 40,75,453ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು, ಭಾನುವಾರ 38 ಸೇರಿದಂತೆ ಈವರೆಗೆ 40,34,519 ಮಂದಿ ಗುಣಮುಖರಾಗಿದ್ದಾರೆ. ಈಗ 616 ಸಕ್ರಿಯ ಪ್ರಕರಣಗಳಿವೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಯಾವುದೇ ಸಮಯದಲ್ಲಿ ಕರ್ನಾಟಕ ವಿಧಾನಸಭೆಗೆ ಚುನಾವಣೆ ಘೋಷಣೆ ಸಾಧ್ಯತೆ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಚುನಾವಣಾ ಆಯೋಗದ ಸೂಚನೆ

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement