4 ಲಕ್ಷ ರೂ.ಮೌಲ್ಯದ ಬಂಗಾರದ ಸರ, ಮೊಬೈಲ್‌ ಕಳೆದುಕೊಂಡ ಅಂಗನವಾಡಿ ಶಿಕ್ಷಕಿ: ತಕ್ಷಣವೇ ಕಾರ್ಯಪ್ರವೃತ್ತರಾಗಿ ಪತ್ತೆ ಮಾಡಿ ಮರಳಿಸಿದ ಪೊಲೀಸರು

posted in: ರಾಜ್ಯ | 0

ಸಿದ್ದಾಪುರ: ಅಂಗನವಾಡಿ ಶಿಕ್ಷಕಿಯೊಬ್ಬರು ಶಾಲೆಗೆ ಹೋಗುವಾಗ ಸುಮಾರು 4 ಲಕ್ಷ ರೂ. ಮೌಲ್ಯದ ಬಂಗಾರದ ಸರ ಹಾಗೂ ಮೊಬೈಲ್‌ ಕಳೆದುಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಲೂಕಿನಲ್ಲಿ ನಡೆದಿತ್ತು. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ ತಕ್ಷಣವೇ ಕಾರ್ಯಪ್ರವೃತ್ತರಾದ ಸಿದ್ದಾಪುರ ಪೊಲೀಸರು ಸೊರಬಾ ಬಳಿ ಪತ್ತೆ ಹಚ್ಚಿ ಅವುಗಳನ್ನು ವಾರಸುದಾರರಿಗೆ ಮರಳಿಸಿ ಸಾರ್ವಜನಿಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಸಿದ್ದಾಪುರ ತಾಲೂಕಿನ ಕಾನಗೋಡಿನ ಪೂರ್ಣಿಮಾ ನಾಯ್ಕ ಎಂಬವರು ಸೋಮವಾರ ಅವರಗುಪ್ಪಾ ಅಂಗನವಾಡಿಗೆ ಹೋಗುತ್ತಿದ್ದಾಗ ಬಳ್ಳಟ್ಟೆ ಹತ್ತಿರ ಬ್ಯಾಗನಲ್ಲಿದ್ದ 7 ತೊಲೆ ಬಂಗಾರದ ಸರ ಹಾಗೂ ಮೊಬೈಲ್ ಕಳೆದುಕೊಂಡಿದ್ದರು. ನಂತರ ಅವರು ಪೊಲೀಸ್‌ ಠಾಣೆಗೆ ಈ ಬಗ್ಗೆ ದೂರು ನೀಡಿದರು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಸೊರಬ ಬಳಿ ಮೊಬೈಲ್ ಟ್ರೇಸ್ ಮಾಡಿದರು. ತಕ್ಷಣವೇ ಸೊರಬಕ್ಕೆ ತೆರಳಿ ಮಹಿಳೆ ಕಳೆದುಕೊಂಡ ವಸ್ತುಗಳನ್ನು ಪತ್ತೆ ಮಾಡಿದರು. ಅವನ್ನು ತಂದು ಪೂರ್ಣಿಮಾ ನಾಯ್ಕ ಅವರಿಗೆ ಮರಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪಿ.ಎಸ್.ಐಗಳಾದ ಎಂ.ಜಿ.ಕುಂಬಾರ, ಮಲ್ಲಿಕಾರ್ಜುನಯ್ಯ ಕೊರಾಣಿ, ಠಾಣೆಯ ರಮೇಶ ಕೂಡಲ್, ಉದಯ ಮೇಸ್ತಾ ಹಾಗೂ ಸಂಗೀತಾ ಕಾನಡೆ ಒಳಗೊಂಡ ತಂಡದ ಪಾಲ್ಗೊಂಡಿತ್ತು. ಪೊಲೀಸರ ಕ್ಷಿಪ್ರ ಕಾರ್ಯಾಚರಣೆಗೆ ಸಾರ್ವಜನಿಕರ ಪ್ರಶಂಸೆ ವ್ಯಕ್ತವಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ನಿಧಿ ಆಸೆಗಾಗಿ ಶಿವಲಿಂಗವನ್ನೇ ಕಿತ್ತ ದುಷ್ಕರ್ಮಿಗಳು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement