ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಗುಡುಗು ಮಿಂಚು ಸಹಿತ ಮಳೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಾರ್ಚ್‌ 26ರಿಂದ ನಾಲ್ಕು ದಿನಗಳ ಕಾಲ ಮಳೆ ಮುನ್ಸೂಚನೆ ನೀಡಲಾಗಿದೆ.
ಮಾರ್ಚ್‌ 26ರಿಂದ 29ರವರೆಗೆ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಹಾಸನ, ಮೈಸೂರು ಹಾಗೂ ರಾಮನಗರದಲ್ಲಿ ಗುಡುಗು ಮಿಂಚು ಸಹಿತ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಅಲ್ಲದೆ, ಕೊಡಗು, ಬಳ್ಳಾರಿ, ಕಲಬುರಗಿ, ರಾಯಚೂರು ಮತ್ತು ಬೀದರ್‌ನಲ್ಲಿ ಮಾರ್ಚ್‌ 26ರಂದು ಸಾಧಾರಣ ಮಳೆ ಸುರಿಯಲಿದೆ ಎಂದು ತಿಳಿಸಲಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಏರಿಳಿತವಾಗಿದ್ದು, ಶನಿವಾರ ಕಲಬುರಗಿಯಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಅಧಿಕ ತಾಪಮಾನ ದಾಖಲಾದರೆ, ಧಾರವಾಡದಲ್ಲಿ ಕಡಿಮೆ ತಾಪಮಾನ 15.6 ಉಷ್ಣಾಂಶ ವರದಿಯಾಗಿದೆ.

 

1 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರಿನ ಹಲವೆಡೆ ಜೋರಾಗಿ ಮಳೆ

ನಿಮ್ಮ ಕಾಮೆಂಟ್ ಬರೆಯಿರಿ

advertisement