ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಕಾಂಗ್ರೆಸ್ ಕೈವಾಡ : ಸಿಎಂ ಬೊಮ್ಮಾಯಿ ಆರೋಪ

ಚಿಕ್ಕಬಳ್ಳಾಪುರ : ಒಳ ಮೀಸಲಾತಿ ಜಾರಿಗೆ ವಿರೋಧಿಸಿ ಶಿಕಾರಿಪುರದಲ್ಲಿ ನಡೆದ ಪ್ರತಿಭಟನೆ ವೇಳೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮನೆ ಮೇಲೆ ನಡೆದ ಕಲ್ಲು ತೂರಾಟದ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಇಂದು, ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಮನೆ ಮೇಲೆ ನಡೆದ ಕಲ್ಲು ತೂರಾಟದ ಹಿಂದೆ ಶಿವಮೊಗ್ಗದ ಸ್ಥಳೀಯ ಕಾಂಗ್ರೆಸ್ ಮುಖಂಡರ ಕೈವಾಡವಿದೆ. ಅವರು ರಾಜಕೀಯ ಲಾಭಕ್ಕಾಗಿ ಇಂತಹ ಕೃತ್ಯ ಮಾಡುತ್ತಿದ್ದಾರೆ. ಒಂದು ರಾಷ್ಟ್ರೀಯ ಪಕ್ಷ ಮಾಡುವಂತಹ ಕೆಲಸವಲ್ಲ. ಕಾಂಗ್ರೆಸ್ ಶಕುನಿ ಕೆಲಸ ಮಾಡುತ್ತಿರುವ ಬಗ್ಗೆ ಸುರ್ಜೆವಾಲ ಹೇಳಬೇಕು ಎಂದು ಹೇಳಿದರು.
ನಾವು ಸದಾಶಿವ ವರದಿಯಂತೆ ಒಳ ಮೀಸಲಾತಿ ಜಾರಿಗೆ ತಂದಿಲ್ಲ. ಸಚಿವ ಸಂಪುಟದ ತೀರ್ಮಾನದಂತೆ ಮಾಡಿದ್ದೇವೆ. ಯಾವ ಸಮಾಜಕ್ಕೂ ಅನ್ಯಾಯ ಮಾಡಿಲ್ಲ, ಬದಲಾಗಿ ಮೀಸಲಾತಿ ಹೆಚ್ಚಳವಾಗಿದೆ ಎಂದು ತಿಳಿಸಿದರು.
ಬಂಜಾರಾ ಸಮುದಾಯದ ಜನರನ್ನು ಪ್ರಚೋದಿಸಿ ಪ್ರತಿಭಟನೆ ನಡೆಸುವಂತೆ ಮಾಡಿದ್ದಾರೆ. ಯಾರೂ ಕೂಡ ಪ್ರಚೋದನೆಗೆ ಒಳಗಾಗಬಾರದು ಹಾಗೂ ಸಮಾಜ ಪ್ರಕ್ಷುಬ್ಧಗೊಳಿಸುವ ಕೆಲಸವನ್ನು ಯಾರೂ ಮಾಡಬಾರದು ಎಂದು ಮನವಿ ಮಾಡಿದರು.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement