ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್‌ಗೆ ಮಾಜಿ ಸಚಿವ ಮನೋಹರ ತಹಶೀಲ್ದಾರ್ ಗುಡ್‌ ಬೈ

posted in: ರಾಜ್ಯ | 0

ಹಾವೇರಿ: ಟಿಕೆಟ್ ಕೈ ತಪ್ಪಿದ ಕಾರಣದಿಂದ ಕಾಂಗ್ರೆಸ್‌ಗೆ ರಾಜೀನಾಮೆ ನೀಡುವುದಾಗಿ ಮಾಜಿ ಸಚಿವ ಮನೋಹರ ತಹಶೀಲ್ದಾರ ಘೋಷಿಸಿದ್ದಾರೆ. ಏಪ್ರಿಲ್ 7ರಂದು ಜೆಡಿಎಸ್ ಸೇರುವುದಾಗಿ ತಿಳಿಸಿದ್ದಾರೆ.
ಶುಕ್ರವಾರ ಹಾನಗಲ್ ಕ್ಷೇತ್ರದಲ್ಲಿ ಬೆಂಬಲಿಗರ ಸಭೆ ನಡೆಸಿದ ಅವರು ಅಲ್ಲಿ ಕಾಂಗ್ರೆಸ್ ತೊರೆಯುವ ನಿರ್ಧಾರ ಪ್ರಕಟಿಸಿದ್ದಾರೆ. ಅಲ್ಲದೇ ಏಪ್ರಿಲ್ 7ರಂದು ಜೆಡಿಎಸ್ ಪಕ್ಷ ಸೇರುತ್ತಿರುವುದಾಗಿ ತಿಳಿಸಿದ್ದಾರೆ ಹಾಗೂ ತನಗೆ ಬೆಂಬಲ ನೀಡುವಂತೆ ಜನರಿಗೆ ಮನವಿ ಮಾಡಿದ್ದಾರೆ..
ನನಗಾದ ಅನ್ಯಾಯಕ್ಕೆ ಅಲ್ಲಿಂದ ಹೊರ ಬಂದಿದ್ದೇನೆ. ಕೈ ಮುಗಿದು ಟಿಕೆಟ್ ಕೇಳಿದೆ. ಇದು ನನ್ನ ಕೊನೆ ಚುನಾವಣೆ ಒಂದು ಅವಕಾಶ ಕೊಡಿ ಎಂದು ಮನವಿ ಮಾಡಿದೆ. ಆದರೆ ಸೌಜನ್ಯಕ್ಕೂ ನನ್ನ ಮಾತು ಕೇಳಲಿಲ್ಲ. ಬದಲಾಗಿ ನನಗೆ ಪಕ್ಷದಿಂದ ಹೊರ ಹೋಗುವಂತೆ ಮಾಡಿದರು. ಹೀಗಾಗಿ ಕಾಂಗ್ರೆಸ್ ಗೆ ವಿದಾಯ ಹೇಳುತ್ತೀದ್ದೇನೆ ಎಂದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಕಾಂಗ್ರೆಸ್ ನನ್ನ ತಾಯಿ ಇದ್ದಂತೆ. ದ್ರೋಹ ಮಾಡಬಾರದು ಎಂದುಕೊಂಡಿದ್ದೆ. ಆದರೆ ದೂರದ ಹುಬ್ಬಳ್ಳಿಯಿಂದ ಬಂದವರಿಗೆ ಮಣೆ ಹಾಕಿದರು. ಆದರೆ ನನಗೆ ನೋವು ಕೊಟ್ಟರೂ ಪಕ್ಷಕ್ಕಾಗಿ ಕೆಲಸ ಮಾಡಿದೆ. ಪರಿಷತ್‌ ಸದಸ್ಯನನ್ನಾಗಿ ಮಾಡುತ್ತೇನೆ ಎಂದು ಹೇಳಿದರು. ಆದರೆ ಕೊನೆಗೆ ಅದ್ವಾವುದನ್ನೂ ಮಾಡದೆ ಪಕ್ಷದಿಂದ ಹೊರ ಹೋಗುವಂತೆ ಮಾಡಿದರು ಎಂದರು.
ಏಪ್ರಿಲ್ 7ರಂದು ಜೆಡಿಎಸ್ ಪಂಚಯಾತ್ರೆ ವೇಳೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಸೇರ್ಪಡೆಗೊಳ್ಳಲಿದ್ದಾರೆ. ಹಾನಗಲ್ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ಸಾಧ್ಯತೆ ಇದೆ.

ಇಂದಿನ ಪ್ರಮುಖ ಸುದ್ದಿ :-   ನಿಧಿ ಆಸೆಗಾಗಿ ಶಿವಲಿಂಗವನ್ನೇ ಕಿತ್ತ ದುಷ್ಕರ್ಮಿಗಳು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement