ಶಿರಸಿ : ಕೂಡ್ಲಗಿ ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಶುಕ್ರವಾರ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಸಲ್ಲಿಸಿದರು.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿರುವ ಕಾಗೇರಿಯ ಶಾಸಕರ ಕಚೇರಿಗೆ ಆಗಮಿಸಿದ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆಯೇ ಸ್ಪೀಕರ್ ಭೇಟಿಗೆ ಅವಕಾಶ ಕೇಳಿದ್ದರು ಎನ್ನಲಾಗಿದ್ದು. ಬೆಂಗಳೂರಿನಲ್ಲಿ ಅವಕಾಶ ಲಭ್ಯವಾಗದ ಹಿನ್ನೆಲೆಯಲ್ಲಿ ಚಿತ್ರದುರ್ಗದಿಂದ ಶಿರಸಿಗೆ ಆಗಮಿಸಿ ರಾಜೀನಾಮೆ ಸಲ್ಲಿಸಿದರು.
ಎನ್ ವೈ ಗೋಪಾಲಕೃಷ್ಣ ಒಟ್ಟು ಆರು ಬಾರಿ ಶಾಸಕರಾಗಿದ್ದರು, ನಾಲ್ಕುಬಾರಿ ಮೊಣಕಾಲ್ಮೂರು ಶಾಸಕರಾಗಿ, ತಲಾ ಒಂದು ಸಲ ಬಳ್ಳಾರಿ ಗ್ರಾಮೀಣ, ಹಾಗೂ ಕೂಡ್ಲಗಿ ಶಾಸಕರಾಗಿ ಆಯ್ಕೆಯಾಗಿದ್ದರು. 2018ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಕೊಡ್ಲಿಗಿಯಿಂದ ಸ್ಪರ್ಧಿಸಿ ಜಯಗಳಿಸಿದ್ದರು. ವರದಿ ಪ್ರಕಾರ ಅವರು ಶೀಘ್ರವೇ ಕಾಂಗ್ರೆಸ್ ಸೇರಲಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು ಎಂದು ಸುದ್ದಿಯಾಗಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ