ಬೆಳಗಾವಿ: ರಾಮನವಮಿ ಮೆರವಣಿಗೆ ವೇಳೆ ಕನ್ನಡ ಧ್ವಜ ಹಿಡಿದಿದ್ದ ಯುವಕನ ಮೇಲೆ ಹಲ್ಲೆ

ಬೆಳಗಾವಿ : ರಾಮನವಮಿ ಮೆರವಣಿಗೆ ವೇಳೆ ನಗರದ ಟಿಳಕಚೌಕ ಬಳಿಯ ರಾಮಲಿಂಗಖಿಂಡಗಲ್ಲಿಯ ಶಿವಸೇನೆ ಕಚೇರಿ ಎದುರು ಮೆರವಣಿಗೆ ಹೋಗುವಾಗ ಯುವಕನ ಮೇಲೆ ಗುರುವಾರ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ.
ಯುವಕ ಮೆರವಣಿಗೆಯಲ್ಲಿ ಕನ್ನಡ ಧ್ವಜ ಹಾರಿಸಿದ್ದಾನೆ ಎಂಬ ಕಾರಣಕ್ಕೆ ಆತನ ಮೇಲೆ ಹಲ್ಲೆ ಮಾಡಲಾಗಿದೆ. ನಗರದ ತಿಲಕ ಚೌಕ್‌ ಬಳಿ ರಾಮನವಮಿ ಮೆರವಣಿಗೆ ವೇಳೆ ನೂರಾರು ಯುವಕರು ಭಗವಾಧ್ವಜ ಹಿಡಿದು ಸಾಗುತ್ತಿದ್ದರು. ಆಗ ಮಂಜುನಾಥ ಎಂಬ ಯುವಕ ಕನ್ನಡ ಬಾವುಟ ಹಿಡಿದು ಮೆರವಣಿಗೆಯಲ್ಲಿ ಸಾಗಿದ್ದ, ಕೆಲವು ಮರಾಠಿ ಭಾಷಿಕರು ಎಂದು ಹೇಳಲಾದ ಕೆಲವರು ಆತನ ಜೊತೆ ವಾಗ್ವಾದ ನಡೆಸಿದ್ದಾರೆ.ನಂತರ ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಕನ್ನಡಪರ ಸಂಘಟನೆಯ ಹೋರಾಟಗಾರರು ಘಟನೆಯನ್ನು ಖಂಡಿಸಿದ್ದು, ಈ ಬಗ್ಗೆ ಖಡೇ ಬಜಾರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement