ಮಂಗಳೂರು ಲಾಡ್ಜ್ ನಲ್ಲಿ ನಾಲ್ವರು ಆತ್ಮಹತ್ಯೆ

ಮಂಗಳೂರು: ನಗರದ ಕೆ.ಎಸ್.ರಾವ್ ರಸ್ತೆಯ ಲಾಡ್ಜ್ ನಲ್ಲಿ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ವರದಿಯಾಗಿದ್ದು, ಅವರೆಲ್ಲ ಒಂದೇ ಕುಟುಂಬದವರೆಂದು ಹೇಳಲಾಗಿದೆ.
ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನವರೆಂದು ತಿಳಿದು ಬಂದಿದ್ದು, ದೇವೆಂದ್ರ, ಅವರ ಪತ್ನಿ ನಿರ್ಮಲಾ ಹಾಗೂ ಇಬ್ಬರು ಅವಳಿ ಹೆಣ್ಣುಮಕ್ಕಳು ಎಂದು ಹೇಳಲಾಗಿದೆ. ಪಕ್ಕದಲ್ಲೇ ಡೆತ್‌ನೋಟ್‌ ಕೂಡ ಪತ್ತೆಯಾಗಿದೆ ಎನ್ನಲಾಗಿದೆ.
ನಾಲ್ವರ ಪೈಕಿ ದೇವೇಂದ್ರ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದರೆ ಉಳಿದ ಮೂವರು ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳಿಗೆ ವಿಷ ಕೊಟ್ಟ ನಂತರ ದೇವೇಂದ್ರ ನಂತರ ತಾನು ನೇಣು ಬಿಗಿದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆರ್ಥಿಕ ಮುಗ್ಗಟ್ಟಿನಿಂದ ಈ ಕುಟುಂಬ ಮಂಗಳೂರಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುರುವಾರ ಸಂಝೆ ಈ ಕುಟುಂಬ ರೂಮಿನ ಚೆಕ್‌ ಔಟ್‌ ಮಾಡಬೇಕಿತ್ತು. ಆದರೆ ಮಾಡಿರಲಿಲ್ಲ. ಬೆಳಿಗ್ಗೆ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಆಗಷ್ಟೇ ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಲಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement