ಶ್ರೀರಾಮನ ಮೂರ್ತಿ ತೊಡೆ ಮೇಲೆ ಏರಿ ಹೂಮಾಲೆ ಹಾಕಿ ಬಿಜೆಪಿ ಶಾಸಕನಿಂದ ಎಡವಟ್ಟು

ಬೀದರ: ಶ್ರೀರಾಮ ನವಮಿಯಂದು ಶ್ರೀರಾಮನ ಮೂರ್ತಿಯ ತೊಡೆ ಮೇಲೆ ಏರಿ ಹೂಮಾಲೆ ಹಾಕಿ ಬಿಜೆಪಿ ಶಾಸಕ ಎಡವಟ್ಟು ಮಾಡಿಕೊಂಡಿದ್ದಾರೆ.
ಗುರುವಾರ ಶ್ರೀರಾಮನ ನವಮಿಯಂದು ಬಿಜೆಪಿ ಶಾಸಕರ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
ಬೀದರ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ ಶ್ರೀರಾಮನ ಶೋಭಾಯಾತ್ರೆ ವೇಳೆ ಬಸವಕಲ್ಯಾಣ ಶಾಸಕ ಶರಣು ಸಲಗರ (Sharanu Salagar) ಅವರು ಶ್ರೀರಾಮನ ಎಡಗಡೆಯ ತೊಡೆ ಮೇಲೆ ನಿಂತು ಕೊರಳಿಗೆ ಹೂವಿನ ಹಾರ ಹಾಕಿ ಫೋಟೋಕ್ಕೆ ಪೋಸ್ ನೀಡಿದ್ದಾರೆ. ಈ ದೃಶ್ಯವನ್ನು ನೆರೆದಿದ್ದವರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದು, ಈಗ ಈ ವೀಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ನಂತರ ಶ್ರೀರಾಮನ‌ ಮೂರ್ತಿ ಮೇಲೆ ನಿಂತು ಮಾಲಾರ್ಪಣೆ ಮಾಡಿದ್ದಕ್ಕೆ ಸಾರ್ವಜನಿಕರಿಂದ ಆಕ್ರೋಶ‌ ವ್ಯಕ್ತವಾಗುತ್ತಿದೆ. ಮಾಜಿ ಶಾಸಕ‌ ಮಲ್ಲಿಕಾರ್ಜುನ ಖೂಬಾ ಪೇಸ್‌ಬುಕ್‌ನಲ್ಲಿ‌ ಪೋಸ್ಟ್ ಮಾಡಿ ಕಿಡಿಕಾರಿದ್ದಾರೆಚುನಾವಣಾ ಪ್ರಚಾರದ ಭರಾಟೆಯಲ್ಲಿ ಎಡವಟ್ಟು ಮಾಡಿಕೊಂಡ ಶಾಸಕ ಈಗ ಸಾರ್ವಜನಿಕರ ಆಕ್ರೋಶ ಎದುರಿಸುತ್ತಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement