ರಾಮನಗರ: ಬೆಂಗಳೂರು-ಮೈಸೂರು ಎಕ್ಸಪ್ರೆಸ್ ಹೆದ್ದಾರಿ (Bengaluru-Mysore Express way) ಟೋಲ್ ದರ ಹೆಚ್ಚಳಕ್ಕೆ ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಟೋಲ್ ಹೆಚ್ಚಳದ ಆದೇಶವನ್ನು ಹಿಂಡೆದಿದೆ.
ಎನ್ಹೆಚ್ಎಐ ಶೇ.22ರಷ್ಟು ಟೋಲ್ ದರ ಹೆಚ್ಚಿಸಿ ಆದೇಶ ಹೊರಡಿಸಿತ್ತು. ಆದರೆ ಸಾರ್ವಜನಿಕರಿಂದ ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಹಿಂಪಡೆದಿದೆ. ಟೋಲ್ ಸಂಗ್ರಹ ಆರಂಭವಾದ 17 ದಿನದಲ್ಲೇ ಎನ್ಹೆಚ್ಎಐ ಶೇಕಡಾ 22ರಷ್ಟು ಟೋಲ್ ದರ ಹೆಚ್ಚಳ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು. ಪರಿಷ್ಕೃತ ದರ ಇಂದು (ಏಪ್ರಿಲ್ 1) ರಿಂದ ಜಾರಿಗೆ ಬರಬೇಕಿತ್ತು. ಆದರೆ ಜನಾಕ್ರೋಶ ಹಾಗೂ ಮೈಸೂರು ಸಂಸದ ಪ್ರತಾಪ ಸಿಂಹ ಅವರು ಎನೆಚ್ಎಐಗೆ ದರ ಹೆಚ್ಚಳ ಮಾಡದಂತೆ ಒತ್ತಾಯ ಮಾಡಿದ್ದರ ಹಿನ್ನೆಲೆಯಲ್ಲಿ ದರ ಹೆಚ್ಚಳವನ್ನು ಕೈಬಿಡಲಾಗಿದೆ ಎನ್ನಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ